ಸಂಗ್ರಹ ಚಿತ್ರ 
ರಾಜ್ಯ

ಪತಿ-ಪತ್ನಿ ನಡುವೆ ಜಗಳ: ಅತ್ತೆ ಕತ್ತು ಕೊಯ್ದು ಹತ್ಯೆಗೈದ ಅಳಿಯ

ಮೊಮ್ಮಗುವನ್ನು ಕರೆದುಕೊಂಡು ಹೋಗಲು ಬಂದದ್ದ ಅತ್ತೆಯ ಕತ್ತು ಕೊಯ್ದು ಅಳಿಯನೇ ಹತ್ಯೆ ಮಾಡಿರುವ ದಾರುಣ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಬೆಂಗಳೂರು: ಮೊಮ್ಮಗುವನ್ನು ಕರೆದುಕೊಂಡು ಹೋಗಲು ಬಂದದ್ದ ಅತ್ತೆಯ ಕತ್ತು ಕೊಯ್ದು ಅಳಿಯನೇ ಹತ್ಯೆ ಮಾಡಿರುವ ದಾರುಣ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಕೆಜಿಎಫ್ ಮೂಲದ ಮಾರಿಕೊಪ್ಪಂ ನಿವಾಸಿ ಏಳಲ್ ಅರಸಿ (48) ಹತ್ಯೆಯಾದ ಮಹಿಳೆಯಾಗಿದ್ದಾರೆ. ಆರೋಪಿಯನ್ನು ದಿನಾಕರ್ (38) ಎಂದು ಗುರ್ತಿಸಲಾಗಿದೆ.

ಆರೋಪಿ ದಿವಾಕರ್ 12 ವರ್ಷಗಳ ಹಿಂದೆ ಅರಸಿ ಅವರ ಪುತ್ರಿಯೊಬ್ಬರನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ, ಪದೇ ಪದೇ ಜಗಳವಾಗುತ್ತಿದ್ದರಿಂದ ದಿವಾಕರ್ ಪತ್ನಿ ಆತನನ್ನು ತೊರೆದು ಕೆಜಿಎಫ್‌ನಲ್ಲಿರುವ ತನ್ನ ತಾಯಿಯ ಮನೆಯಲ್ಲಿ ವಾಸವಾಗಿದ್ದಳು. ಮಗಳನ್ನೂ ಕರೆದುಕೊಂಡು ಹೋಗಿದ್ದಳು.

ಆ ನಡುವೆ ಆರೋಪಿಯು ತನ್ನ ಪತ್ನಿ ಮತ್ತು ಅತ್ತೆಗೆ ಮಾಹಿತಿ ನೀಡದಂತೆಯೇ ಕೆಜಿಎಫ್‌ಗೆ ಹೋಗಿ ಮಗಳನ್ನು ಬೆಂಗಳೂರಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದ, ನಂತರ ಮಗಳನ್ನು ಕೆಂಗೇರಿಯ ನಾಗದೇವನಹಳ್ಳಿಯ ಬೃಂದಾವನ ಲೇಔಟ್‌ನಲ್ಲಿರುವ ಸಹೋದರಿಯ ಮನೆಯಲ್ಲಿ ಇರಿಸಿದ್ದ, ಶುಕ್ರವಾರ ಅರಸಿ ಅವರು ತಮ್ಮ ಸಹೋದರಿ ಸುಷ್ಮಾ ಮತ್ತು ಸೋದರ ಮಾವ ಕಾರ್ತಿಕ್ ಜೊತೆಗೆ ಮೊಮ್ಮಗಳನ್ನು ಮರಳಿ ಕರೆ ತರಲು ಕೆಂಗೇರಿಗೆ ಬಂದಿದ್ದಾರೆ.

ಇದರಿಂದ ಕೋಪಗೊಂಡ ದಿವಾಕರ್ ಅರಸಿ ಹಾಗೂ ಆಕೆಯ ಸಹೋದರಿಯ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಅರಸಿಯವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ.

ಕೂಡಲೇ ಅರಸಿ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು. ಆಕೆಯ ಸಹೋದರಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಅರಸಿಗೆ ಐದು ಮಕ್ಕಳಿದ್ದು, ಆಕೆಯ ಒಬ್ಬ ಮಗಳು ತಮಿಳರಸಿ ದಿವಾಕರ್ ಅವರನ್ನು ವಿವಾಹವಾಗಿದ್ದರು, ನಿರಂತರ ಜಗಳದಿಂದಾಗಿ ದಂಪತಿಗಳು ತಮ್ಮ ವೈವಾಹಿಕ ಭಿನ್ನಾಭಿಪ್ರಾಯವನ್ನು ಬಗೆಹರಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಕರಣ ಸಂಬಂಧ ಕೆಂಗೇರಿ ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಇತರ ಸೆಕ್ಷನ್‌ಗಳ ಜೊತೆಗೆ ಕೊಲೆ ಪ್ರಕರಣವನ್ನು ಆರೋಪಿ ವಿರುದ್ಧ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT