ಹುಲಿ ದಾಳಿ (ಸಂಗ್ರಹ ಚಿತ್ರ) 
ರಾಜ್ಯ

TNIE-ಕನ್ನಡಪ್ರಭ ಆನ್ಲೈನ್ ವರದಿ ಫಲಶೃತಿ: ಹುಲಿ ದಾಳಿ-ಸಾವು ಕುರಿತು ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು!

ರಾಜ್ಯದಲ್ಲಿ ಹುಲಿ ದಾಳಿ ಮತ್ತು ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Expres) ಮತ್ತು ಕನ್ನಡಪ್ರಭ (KannadaPrabha.Com) ಮಾಡಿದ್ದ ವರದಿಯ ಪರಿಣಾಮ ಉಪ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಹುಲಿ ದಾಳಿ ಮತ್ತು ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Expres) ಮತ್ತು ಕನ್ನಡಪ್ರಭ (KannadaPrabha.Com) ಮಾಡಿದ್ದ ವರದಿಯ ಪರಿಣಾಮ ಉಪ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಹೌದು.. ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಹುಲಿ ಹಿಡಿಯಲು ವಿಫಲವಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜನರು ತೀವ್ರ ಪಟ್ಟು ಹಡಿದಿದ್ದರು. ಈ ಕುರಿತು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಹುಣಸೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಪಿ.ಮಂಜುನಾಥ್ ಸೇರಿದಂತೆ ವಿರಾಜಪೇಟೆಯ ಸ್ಥಳೀಯರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದೇ ವಿಚಾರವಾಗಿ ಇದೇ ಫೆಬ್ರವರಿ 14ರಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (https://bityl.co/HMoW) ಮತ್ತು ಕನ್ನಡಪ್ರಭ ಆನ್ ಲೈನ್ (https://bityl.co/HMxW) ನಲ್ಲಿ ವರದಿ ಪ್ರಕಟಿಸಲಾಗಿತ್ತು. ಇದೀಗ ಈ ವರದಿಗಳ ಬೆನ್ನಲ್ಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಲೋಕಾಯುಕ್ತರು ಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಮಾತ್ರವಲ್ಲದೇ ಈ ಸಂಬಂಧ ರಾಜ್ಯದಲ್ಲಿ ಇಂತಹ ಅನಿಶ್ಚಿತತೆಗಳನ್ನು ತಡೆಗಟ್ಟಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಶ್ನಿಸಿ ಇದಕ್ಕೆ ಉತ್ತರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮತ್ತು ಅರಣ್ಯ ಇಲಾಖೆಗೆ ನಿರ್ದೇಶನ ಕೂಡ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT