ಹುಲಿ ದಾಳಿ (ಸಂಗ್ರಹ ಚಿತ್ರ) 
ರಾಜ್ಯ

TNIE-ಕನ್ನಡಪ್ರಭ ಆನ್ಲೈನ್ ವರದಿ ಫಲಶೃತಿ: ಹುಲಿ ದಾಳಿ-ಸಾವು ಕುರಿತು ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು!

ರಾಜ್ಯದಲ್ಲಿ ಹುಲಿ ದಾಳಿ ಮತ್ತು ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Expres) ಮತ್ತು ಕನ್ನಡಪ್ರಭ (KannadaPrabha.Com) ಮಾಡಿದ್ದ ವರದಿಯ ಪರಿಣಾಮ ಉಪ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಹುಲಿ ದಾಳಿ ಮತ್ತು ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Expres) ಮತ್ತು ಕನ್ನಡಪ್ರಭ (KannadaPrabha.Com) ಮಾಡಿದ್ದ ವರದಿಯ ಪರಿಣಾಮ ಉಪ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಹೌದು.. ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಹುಲಿ ಹಿಡಿಯಲು ವಿಫಲವಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜನರು ತೀವ್ರ ಪಟ್ಟು ಹಡಿದಿದ್ದರು. ಈ ಕುರಿತು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಹುಣಸೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಪಿ.ಮಂಜುನಾಥ್ ಸೇರಿದಂತೆ ವಿರಾಜಪೇಟೆಯ ಸ್ಥಳೀಯರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದೇ ವಿಚಾರವಾಗಿ ಇದೇ ಫೆಬ್ರವರಿ 14ರಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (https://bityl.co/HMoW) ಮತ್ತು ಕನ್ನಡಪ್ರಭ ಆನ್ ಲೈನ್ (https://bityl.co/HMxW) ನಲ್ಲಿ ವರದಿ ಪ್ರಕಟಿಸಲಾಗಿತ್ತು. ಇದೀಗ ಈ ವರದಿಗಳ ಬೆನ್ನಲ್ಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಲೋಕಾಯುಕ್ತರು ಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಮಾತ್ರವಲ್ಲದೇ ಈ ಸಂಬಂಧ ರಾಜ್ಯದಲ್ಲಿ ಇಂತಹ ಅನಿಶ್ಚಿತತೆಗಳನ್ನು ತಡೆಗಟ್ಟಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಶ್ನಿಸಿ ಇದಕ್ಕೆ ಉತ್ತರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮತ್ತು ಅರಣ್ಯ ಇಲಾಖೆಗೆ ನಿರ್ದೇಶನ ಕೂಡ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ