ಮೃತ ತಂದೆ ನಾರಾಯಣಸ್ವಾಮಿ ಹಾಗೂ ಪಾಪಿ ಮಗ ಮಣಿಕಂಠ 
ರಾಜ್ಯ

ಬೆಂಗಳೂರು: ಸುಪಾರಿ ನೀಡಿ ತಂದೆ ಕೊಲೆ ಮಾಡಿಸಿದ್ದ ಪಾಪಿ ಮಗ ಸೇರಿ ಮೂವರ ಸೆರೆ

ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ನೀಡಿ ತಂದೆಯನ್ನೇ ಕೊಲೆ ಮಾಡಿಸಿದ್ದ ಪಾಪಿ ಮಗ ಸೇರಿದಂತೆ ಮೂವರನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ನೀಡಿ ತಂದೆಯನ್ನೇ ಕೊಲೆ ಮಾಡಿಸಿದ್ದ ಪಾಪಿ ಮಗ ಸೇರಿದಂತೆ ಮೂವರನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಅಪಾರ್ಟ್ ಮೆಂಟ್ ವೊಂದರ ವಾಹನ ನಿಲುಗಡೆ ಪ್ರದೇಶದಲ್ಲಿ ತಂದೆ ನಾರಾಯಣಸ್ನಾಮಿಯನ್ನು ಕೊಲೆ ಮಾಡಿಸಿದ್ದ ಪುತ್ರ ಮಣಿಕಂಠ ಹಾಗೂ ಸುಪಾರಿ ಪಡೆದ ಶಿವಕುಮಾರ್, ನವೀನ್ ಕುಮಾರ್ ಎಂಬವರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ. 

ಕಳೆದ ಫೆ.13 ರಂದು ಅಪಾರ್ಟ್ ಮೆಂಟ್ ನ ವಾಹನ ನಿಲುಗಡೆ ಪ್ರದೇಶದಲ್ಲಿ ನಾರಾಯಣಸ್ವಾಮಿ ಅವರ ಕೊಲೆ ಆಗಿತ್ತು. ಈ ಕೊಲೆಗೆ ಹಂತಕ ನವೀನ್ ಕುಮಾರ್ ಗೆ ಮುಂಗಡ 1 ಲಕ್ಷ ನೀಡಿದ್ದ ಮಣಿಕಂಠ, ತನ್ನ ತಂದೆಯನ್ನು ಕೊಲೆ ಮಾಡಲು 1 ಕೋಟಿ ರೂ. ಸುಪಾರಿ ನೀಡಿದ್ದ ಎಂದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಮಣಿಕಂಠ ಹಿಂದೆ ತನ್ನ ಮೊದಲ ಪತ್ನಿಯನ್ನು ಕೊಲೆ ಮಾಡಿ ಜೈಲು ಸೇರಿ ಜಾಮೀನನ ಮೇಲೆ ಹೊರಗೆ ಬಂದು ಎರಡು ವಿವಾಹವಾಗಿದ್ದು, ದಂಪತಿಗೆ ಒಂದು ಹೆಣ್ಣು ಮಗುವಿದೆ ಎಂದು ಡಿಸಿಪಿ ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ನನಗೆ ಇರೋದ್ 5 ಬೆರಳು: ಸಾವಿನ ವದಂತಿ ಮಧ್ಯೆ ಚಹಾ ಕುಡಿಯುತ್ತ ಕಾಣಿಸಿಕೊಂಡ ಇಸ್ರೇಲ್ ಪ್ರಧಾನಿ; ಇರಾನ್‌ಗೆ ಮುಖಭಂಗ; Video

'ಒಂದು ವೇಳೆ ಬದುಕಿದ್ದರೆ, ಹುಡುಕಿ ಕೊಲ್ಲುತ್ತೇವೆ': ಬೆಂಜಮಿನ್ ನೆತನ್ಯಾಹು ಸಾವಿನ ವದಂತಿಗಳ ನಡುವೆ ಇರಾನ್ ಎಚ್ಚರಿಕೆ!

ಯುದ್ಧ: ಮೊದಲ ಬಾರಿಗೆ Dancing Missile ಉಡಾಯಿಸಿದ Iran; 2 ಸಾವಿರ ಕಿ.ಮೀ ವ್ಯಾಪ್ತಿ.. ಅಮೆರಿಕಕ್ಕೆ ತಲೆನೋವು!

ಬಾಲಿವುಡ್ ನಟಿ ಮಧು ಮಲ್ಹೋತ್ರಾ ನಿಧನ

SCROLL FOR NEXT