ಸಂಗ್ರಹ ಚಿತ್ರ 
ರಾಜ್ಯ

ಗಣಿ ದಂಧೆಕೋರರಿಂದ ಕಪ್ಪತಗುಡ್ಡದ ಗುಡ್ಡವನ್ನು ಉಳಿಸಿ: ಪ್ರಧಾನಿ ಮೋದಿಗೆ ಪತ್ರ ಬರೆದ ನಂದಿವೇರಿ‌ ಶಿವಕುಮಾರ ಸ್ವಾಮೀಜಿ

ಗಣಿ ದಂಧೆಕೋರರಿಂದ ಕಪ್ಪತಗುಡ್ಡದ ಗುಡ್ಡವನ್ನು ಉಳಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನಂದಿವೇರಿ‌ಮಠದ ಶಿವಕುಮಾರ ಸ್ವಾಮೀಜಿ ಅವರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಗದಗ: ಗಣಿ ದಂಧೆಕೋರರಿಂದ ಕಪ್ಪತಗುಡ್ಡದ ಗುಡ್ಡವನ್ನು ಉಳಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನಂದಿವೇರಿ‌ಮಠದ ಶಿವಕುಮಾರ ಸ್ವಾಮೀಜಿ ಅವರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಪರಿಸರ ಸೂಕ್ಷ್ಮ ವಲಯದಲ್ಲಿರುವ ಕಲಿಯುಗದ ಸಂಜೀವಿನಿ ಕಪ್ಪತ್ತಗುಡ್ಡವನ್ನು ಗಣಿಗಾರಿಕೆಯಿಂದ ರಕ್ಷಿಸುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ, ಗುಡ್ಡದಲ್ಲಿ ಎದುರಾಗಿರುವ ನೀರಿನ ಅಭಾವದ ಬಗ್ಗೆಯೂ ಶ್ರೀಗಳು ಬರೆದಿದ್ದು, ಪೂಜೆ ಸಲ್ಲಿಸಲೂ ನೀರಿಲ್ಲ ಎಂದು ಹೇಳಿದ್ದಾರೆಂದು ತಿಳಿದುಬಂದಿದೆ.

2019ರಿಂದಲೂ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ಹಲವು ಕಂಪನಿಗಳು ಹೊಂಚು ಹಾಕುತ್ತಾ ಬಂದಿವೆ. ಆದರೆ, ವಿವಿಧ‌ ಮಠಾಧೀಶರು, ಪರಿಸರವಾದಿಗಳ ಹೋರಾಟ ನಡೆಸಿದ ಫಲವಾಗಿ, ಗಣಿಗಾರಿಕೆಗೆ ಕೊಡಲು ಹೊರಟಿದ್ದ ಸರ್ಕಾರ ಕಪ್ಪತ್ತಗುಡ್ಡ ವನ್ಯಜೀವಿ ಧಾಮ ಎಂದು ಘೋಷಣೆ ಮಾಡಿದೆ. ಇಷ್ಟಾದರೂ ಕೆಲವು ಮೈನ್ಸ್ ಹಾಗೂ ಕಲ್ಲು ಗಣಿಗಾರಿಕೆಯವರು ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ಬೆನ್ನು ಬಿದ್ದಿದ್ದಾರೆ.

ಅರಣ್ಯ ಇಲಾಖೆ ಇವರ ಅರ್ಜಿ ತಿರಸ್ಕರಿಸಿದರೂ, ಹೇಗಾದರೂ ಮಾಡಿ ಹಸಿರು ಸಹ್ಯಾದ್ರಿಯನ್ನು ಕಿತ್ತು ತಿನ್ನಬೇಕೆಂಬ ಒಳಸಂಚು ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ವನ್ಯಜೀವಿ ಧಾಮದ ಪ್ರಕಾರ 10 . ವ್ಯಾಪ್ತಿ ಯಾವುದೇ ಗಣಿಗಾರಿಕೆಗೆ ಅನುಮತಿ ಇಲ್ಲ. ಆದರೆ, ಇದನ್ನು ಒಂದು ಕಿ.ಮೀ. ವ್ಯಾಪ್ತಿಗೆ ಇಳಿಸುವಂತೆ ಭೂಗಳ್ಳರು ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಅಲ್ಲದೆ, ಬಲ್ಡೋಟಾ ಕಂಪನಿ ಈ ಬಗ್ಗೆ ಹೈಕೋರ್ಟ್‌ ಮೆಟ್ಟಿಲೇರಿದೆ. ಶತಾಯಗತಾಯ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಗಣಿ ಕಂಪನಿಗಳು ಮತ್ತು ಕಲ್ಲು ಗಣಿಗಾರಿಕೆ ಸಂಸ್ಥೆಗಳು ಕಪ್ಪತ್ತಗುಡ್ಡದ ಖನಿಜ ಸಂಪತ್ತಿನ ಮೇಲೆ ಕಣ್ಣಿಟ್ಟಿವೆ. ಚಿನ್ನ, ಕಬ್ಬಿಣ ಮತ್ತು ಇತರೆ ಖನಿಜಗಳ ಗಣಿಗಾರಿಕೆಗೆ ಹೊಸ ಪ್ರಸ್ತಾವನೆಗಳನ್ನು ಸಲ್ಲಿಸಿವೆ. ಚುನಾವಣೆಗೆ ಮುನ್ನ ರಾಜ್ಯ ಸರ್ಕಾರ ಗಣಿಗಾರಿಕೆಗೆ ಅನುಮತಿ ನೀಡಲು ಉತ್ಸುಕವಾಗಿದೆ. ಒಂದು ವೇಳೆ ರಾಜ್ಯ ಸರ್ಕಾರ ಯಾವುದೇ ಗಣಿಗಾರಿಕೆ ಚಟುವಟಿಕೆಯನ್ನು ಅನುಮೋದಿಸಿದರೆ ಇದು ಪರಿಸರ, ವನ್ಯಜೀವಿ ಮತ್ತು ಜೈವಿಕ ವೈವಿಧ್ಯತೆಯ ಮೇಲೆ ಹಾನಿಕಾರಕ ಪರಿಣಾಮವನ್ನು ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನೀರು, ಮಣ್ಣು ಮತ್ತು ಸಸ್ಯ ಸಂಕುಲವನ್ನು ರಕ್ಷಿಸಲು ನಮ್ಮ 20 ವರ್ಷಗಳ ಪ್ರಾಮಾಣಿಕ ಪ್ರಯತ್ನಗಳು ವ್ಯರ್ಥವಾಗುತ್ತವೆ. ಗದಗ ಜಿಲ್ಲೆಯ ಪರಿಸರ ಸೂಕ್ಷ್ಮವಾಗಿರುವ ‘ಕಪ್ಪತಗುಡ್ಡ’ದಲ್ಲಿ ಗಣಿಗಾರಿಕೆಯಿಂದ ಸಸ್ಯವರ್ಗವನ್ನು ರಕ್ಷಿಸಿ ಎಂದು ಶಿವಕುಮಾರ ಸ್ವಾಮೀಜಿ ವಿನಂತಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT