ಸುರೇಶ್ ಅಂಗಡಿ 
ರಾಜ್ಯ

ಮೋದಿ ರೋಡ್ ಶೋಗೆ ಬೆಳಗಾವಿ ಕೇಸರಿಮಯ: ದಿ. ಸುರೇಶ್ ಅಂಗಡಿ ಫೋಟೋ ಮಿಸ್ಸಿಂಗ್, ಬೆಂಬಲಿಗರ ಬೇಸರ

ಪ್ರಧಾನಿ ಮೋದಿ ರೋಡ್ ಶೋಗೆ ಕುಂದಾನಗರಿ ಸಂಪೂರ್ಣ ಕೇಸರಿಮಯಗೊಂಡಿತ್ತು. ಎಲ್ಲೆಲ್ಲೂ ಮೋದಿ, ಬಿಜೆಪಿಯ ಬ್ಯಾನರ್, ಫ್ಲೆಕ್ಸ್, ಬಂಟಿಂಗ್ಸ್ ಗಳು ರಾರಾಜಿಸುತ್ತಿದ್ದವು. ಆದರೆ, ಈ ಹೋರ್ಡಿಂಗ್‌ಗಳಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ ಅಂಗಡಿ ಅವರ ಫೋಟೋಗಳು ಮಾತ್ರ ಎಲ್ಲಿಯೂ ಕಂಡು ಬಂದಿರಲಿಲ್ಲ...

ಬೆಳಗಾವಿ: ಪ್ರಧಾನಿ ಮೋದಿ ರೋಡ್ ಶೋಗೆ ಕುಂದಾನಗರಿ ಸಂಪೂರ್ಣ ಕೇಸರಿಮಯಗೊಂಡಿತ್ತು. ಎಲ್ಲೆಲ್ಲೂ ಮೋದಿ, ಬಿಜೆಪಿಯ ಬ್ಯಾನರ್, ಫ್ಲೆಕ್ಸ್, ಬಂಟಿಂಗ್ಸ್ ಗಳು ರಾರಾಜಿಸುತ್ತಿದ್ದವು. ಆದರೆ, ಈ ಹೋರ್ಡಿಂಗ್‌ಗಳಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ ಅಂಗಡಿ ಅವರ ಫೋಟೋಗಳು ಮಾತ್ರ ಎಲ್ಲಿಯೂ ಕಂಡು ಬಂದಿರಲಿಲ್ಲ. ಇದಕ್ಕೆ ಬಿಜೆಪಿ ಮುಖಂಡರು ಹಾಗೂ ಸಾರ್ವಜನಿಕ ಪ್ರತಿನಿಧಿಗಳ ವಿರುದ್ಧ ಸುರೇಶ್ ಅಂಗಡಿಯವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗಳಿಗೆ 13ನೇ ಕಂತಿನ ಹಣವನ್ನು ಜಮೆ ಮಾಡುವುದರ ಜೊತೆಗೆ ಹೊಸದಾಗಿ ಅಭಿವೃದ್ಧಿಪಡಿಸಲಾದ ಬೆಳಗಾವಿ ರೈಲು ನಿಲ್ದಾಣ ಮತ್ತು ಬೆಳಗಾವಿ-ಲೋಂಡಾ ಡಬಲ್ ರೈಲು ಮಾರ್ಗ ಸೇರಿದಂತೆ ಎರಡು ಪ್ರಮುಖ ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಅವರು ಸೋಮವಾರ ಬೆಳಗಾವಿಗೆ ಭೇಟಿ ನೀಡಿದ್ದರು.

ಮೋದಿಯವರು ನಿನ್ನೆ ಉದ್ಘಾಟಿಸಿದ ರೈಲ್ವೇ ಇಲಾಖೆಯ ಎರಡು ಯೋಜನೆಗಳಿಗೆ ದಿವಂಗತ ಸುರೇಶ್ ಅಂಗಡಿಯವರು ಕಾರಣಕರ್ತರಾಗಿದ್ದಾರೆ. ಅವರ ಸತತ ಪ್ರಯತ್ನದಿಂದಾಗಿ ಯೋಜನೆ ಉದ್ಘಾಟನೆಗೊಳ್ಳಲು ಸಾಧ್ಯವಾಗಿದೆ. ಆದರೆ, ಬೆಳಗಾವಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿನ್ನೆ ಪ್ರದರ್ಶಿಸಲಾದ ಬಿಜೆಪಿ ನಾಯಕರ ಬ್ಯಾನರ್‌ಗಳಲ್ಲಿ ಸುರೇಶ್ ಅಂಗಡಿ ಅವರ ಭಾವಚಿತ್ರಗಳು ಮಾತ್ರ ಎಲ್ಲಿಯೂ ಕಂಡು ಬಂದಿರಲಿಲ್ಲ. ಇದು ಅವರ ಅನುಯಾಯಿಗಳನ್ನು ಅಸಮಾಧಾನಗೊಳಿಸಿದೆ.

ಖಾಸಗಿ ಕಂಪನಿ ಉದ್ಯೋಗಿ ಅಮರ್ ಪಾವಾಶೆ ಮಾತನಾಡಿ, ಬೆಳಗಾವಿಯಲ್ಲಿ ರೈಲ್ವೆ ಪರಿವರ್ತನೆಗೆ ಅಂಗಡಿ ಪ್ರಯತ್ನ ಪ್ರಮುಖವಾಗಿತ್ತು. "ರೈಲ್ವೆ ಮೇಲೆ ಅವರ ಪ್ರಭಾವ ಇಂದಿಗೂ ಇದೆ, ಬಿಜೆಪಿ ನಾಯಕರು ಅದನ್ನು ಮರೆಯಬಾರದು. ನಗರದಾದ್ಯಂತ ಬಿಜೆಪಿ ನಾಯಕರು ಹಲವು ಹೋರ್ಡಿಂಗ್ಸ್ ಗಳನ್ನು ಅಳವಪಡಿಸಿದ್ದರೂ. ಆದರೆ, ಒಂದರಲ್ಲಿಯೂ ಸುರೇಶ್ ಅಂಗಡಿಯವರ ಫೋಟೋ ಕಾಣದಿರುವುದು ಬೇಸರವನ್ನು ತಂದಿದೆ ಎಂದು ಹೇಳಿದ್ದಾರೆ.

ಈ ಮಧ್ಯೆ ಈ ವಿಚಾರ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಕೂಡ ಆರಂಭವಾಗಿವೆ. ಸುಲೋಚನಾ ಎಂಬ ಶಿಕ್ಷಕಿಯೊಬ್ಬರೂ ಕೂಡ ಸುರೇಶ್ ಅಂಗಡಿಯವರ ಫೋಟೋ ಕಾಣದಿರುವುದಕ್ಕೆ ಬೇಸರ ಹೊರಾಗಿದ್ದಾರೆ.

ಬಿಜೆಪಿ ಮತ್ತು ಆ ಪಕ್ಷದ ನಾಯಕರು ಬೆಳಗಾವಿ ಅಭಿವೃದ್ಧಿಯಲ್ಲಿ ಸುರೇಶ್ ಅಂಗಡಿಯವರ ಕೊಡುಗೆಯನ್ನು ಮರೆತಂತಿದೆ. ಈ ವರ್ತನೆ ಬಿಜೆಪಿಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT