ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ

ಕೇಂದ್ರ ರೈಲ್ವೆ ಸಚಿವಾಲಯ ಕಲಬುರಗಿ-ಬೀದರ್ ಜನರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಉಭಯ ಜಿಲ್ಲೆಗಳ ನಡುವೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಈ ಮೂಲಕ ಈ ಭಾಗದ ಜನರ ಬಹುಕಾಲದ ಬೇಡಿಕೆಗೆ ಹಸಿರು ನಿಶಾನೆ ತೋರಿಸಿದೆ.

ಕಲಬುರಗಿ: ಕೇಂದ್ರ ರೈಲ್ವೆ ಸಚಿವಾಲಯ ಕಲಬುರಗಿ-ಬೀದರ್ ಜನರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಉಭಯ ಜಿಲ್ಲೆಗಳ ನಡುವೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಈ ಮೂಲಕ ಈ ಭಾಗದ ಜನರ ಬಹುಕಾಲದ ಬೇಡಿಕೆಗೆ ಹಸಿರು ನಿಶಾನೆ ತೋರಿಸಿದೆ.

ಕಲಬುರಗಿಯ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಈ ಹಿಂದೆ ಪತ್ರ ಬರೆದು ಕಲಬುರಗಿ-ಬೀದರ್ ನಡುವೆ ಮತ್ತೊಂದು ರೈಲು ಸಂಚಾರ ಆರಂಭಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ. ಈ ಕುರಿತು ಅಶ್ವಿನಿ ವೈಷ್ಣವ್ ಡಾ. ಉಮೇಶ್‌ ಜಾಧವ್‌ಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆನ್ನಲಾಗಿದೆ.

ಸದ್ಯಕ್ಕೆ ಒಂದೇ ಡೆಮು ರೈಲು ಕಲಬುರಗಿ-ಬೀದರ್ ಮಧ್ಯೆ ಸಂಚಾರ ನಡೆಸುತ್ತಿದ್ದು, ಈ ರೈಲು ನಿತ್ಯ ಎರಡು ಬಾರಿ ಸಂಚರಿಸುತ್ತದೆ. ಹೊಸದಾಗಿ ಆರಂಭವಾಗುವ ಡೆಮು ರೈಲು ನಿತ್ಯ ಬೆಳಿಗ್ಗೆ 7.30ಕ್ಕೆ ಕಲಬುರಗಿಯಿಂದ ಹೊರಟು ಬೆಳಿಗ್ಗೆ 10.15ಕ್ಕೆ ಬೀದರ್‌ ತಲುಪುತ್ತದೆ. 10.30ಕ್ಕೆ ಬೀದರ್‌ನಿಂದ ಹೊರಟು ಮಧ್ಯಾಹ್ನ 1.20ಕ್ಕೆ ಕಲಬುರಗಿಗೆ ಮರಳುವುದು. 1.30ಕ್ಕೆ ಇಲ್ಲಿಂದ ಹೊರಟು ಸಂಜೆ 4.45ಕ್ಕೆ ಬೀದರ್ ತಲುಪಲಿದೆ. 5ಕ್ಕೆ ಬೀದರ್‌ನಿಂದ ಹೊರಟು ಸಂಜೆ 7.40ಕ್ಕೆ ಕಲಬುರಗಿಗೆ ಮರಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT