ಸಿಎಂ ಬೊಮ್ಮಾಯಿ 
ರಾಜ್ಯ

ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ, ಆಯೋಗದ ಅಂತಿಮ ವರದಿಯಿಂದ ಎಲ್ಲವೂ ಸ್ಪಷ್ಟವಾಗಲಿದೆ: ಸಿಎಂ ಬೊಮ್ಮಾಯಿ

ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ, ಹಿಂದುಳಿದ ಆಯೋಗದ ಅಂತಿಮ ವರದಿಯಿಂದ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ಹುಬ್ಬಳ್ಳಿ: ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ, ಹಿಂದುಳಿದ ಆಯೋಗದ ಅಂತಿಮ ವರದಿಯಿಂದ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ಸಲ್ಲಿಸಲಿದೆ. ಆಯೋಗದ ಅಂತಿಮ ವರದಿಯಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರದ ಉದ್ದೇಶ ಹೇಳಿದ್ದೇವೆ. ಅಂತಿಮ ವರದಿಯಲ್ಲಿ ಅಂಕಿ ಅಂಶಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಮೀಸಲಾತಿ ಜಾರಿ ವಿಚಾರದಲ್ಲಿ ಸಂಬಂಧಪಟ್ಟವರ ಜತೆ ಚರ್ಚಿಸುತ್ತೇವೆ ಎಂದು ಹೇಳಿದರು.

ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಕೆಲ ವರ್ಗದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಹಿನ್ನಡೆಯಾಗಿರುವುದು ನಿಜ. ಅವರಿಗೆ ನ್ಯಾಯ ಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಬೇಕಾದರೆ ಸ್ಪಷ್ಟೀಕರಣ ಕೊಡುತ್ತೇವೆ, ಯಾರಿಗೂ ಅನ್ಯಾಯ ಮಾಡಲ್ಲ. ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿದ್ದಾಗ ಬೇಡಿಕೆ ಈಡೇರಿಸಲಿಲ್ಲ. ಈಗ ನಾವು ಜಾರಿ ಮಾಡುತ್ತಿರುವುದುರಿಂದ ಅವರಿಗೆ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಮಹಾದಾಯಿ ವಿಚಾರವಾಗಿ ಮಾತನಾಡಿ, ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಡಿಪಿಆರ್​ಗೆ ಒಪ್ಪಿಗೆ ನೀಡಿರುವ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಗೊತ್ತಿಲ್ಲ ಎಂದು ಹೇಳಿದರು.

ಮಹದಾಯಿಗಾಗಿ ನಾವು ಹೋರಾಟ ಮಾಡುದ್ದೆವು, ಅವರೂ ಮಾಡಿದ್ದರು. ಈಗ ಹೋರಾಟಕ್ಕೆ ತಾರ್ಕಿಕ ಜಯ ಸಿಕ್ಕಿದೆ. 20-25 ವರ್ಷ ಹೋರಾಟಕ್ಕೆ ಫಲ ಸಿಕ್ಕಿದೆ. ಈ ವೇಳೆ ಲೋಪದೋಷ ಹುಡುಕುವುದು ಅವರ ಮನಸ್ಥಿತಿ ತೋರಿಸುತ್ತದೆ. ಕಾಂಗ್ರೆಸ್​ ನಾಯಕರ ಟೀಕೆ ಟಿಪ್ಪಣಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಎಂಒಎಫ್ ಕ್ಲಿಯರೆನ್ಸ್ ಬಳಿಕ ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ