ಸಂಗ್ರಹ ಚಿತ್ರ 
ರಾಜ್ಯ

ಮೈಸೂರು: ಮಹಿಳೆ ಬಲಿಪಡೆದು ಇಬ್ಬರ ತುಳಿದು ಗಾಯಗೊಳಿಸಿದ್ದ ಪುಂಡಾನೆ ಸೆರೆ

ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿ ಗ್ರಾಮದಲ್ಲಿ ಶನಿವಾರ 40 ವರ್ಷದ ಮಹಿಳೆಯ ಬಲಿಪಡೆದು,  ತುಳಿದು ಇಬ್ಬರನ್ನು ಗಾಯಗೊಳಿಸಿದ್ದ ಪುಂಡಾನೆಯನ್ನು ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಮೈಸೂರು: ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿ ಗ್ರಾಮದಲ್ಲಿ ಶನಿವಾರ 40 ವರ್ಷದ ಮಹಿಳೆಯ ಬಲಿಪಡೆದು,  ತುಳಿದು ಇಬ್ಬರನ್ನು ಗಾಯಗೊಳಿಸಿದ್ದ ಪುಂಡಾನೆಯನ್ನು ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಮಹಿಳೆಯನ್ನು ಆನೆ ಬಲಿಪಡೆದುಕೊಳ್ಳುತ್ತಿದ್ದಂತಯೇ ಡಿಸಿಎಫ್ ಸೀಮಾ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಶನಿವಾರ ಬೆಳಿಗ್ಗೆ ಶಿಬಿರದ ಆನೆಗಳಾದ ಅಭಿಮನ್ಯು, ಭೀಮ, ಮಹೇಂದ್ರ, ಗಣೇಶ್ ಮತ್ತು ಪ್ರಶಾಂತ್ ಅವರೊಂದಿಗೆ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

ಕಾರ್ಯಾಚರಣೆಯನ್ನು ವೀಕ್ಷಿಸಲು ನೂರಾರು ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸುತ್ತಿದ್ದಂತೆ, ಸ್ಥಳದಲ್ಲಿ ಎದುರಾದ ಶಬ್ದದಿಂದ ಆನೆಯು ಗಾಬರಿಯಿಂದ ಚಿಕ್ಕ ಬೀಚನಹಳ್ಳಿ, ದೊಡ್ಡ ಬೀಚನಹಳ್ಳಿ, ಹಳ್ಳದ ಮನುಗನಹಳ್ಳಿ ಮತ್ತು ಅಕ್ಕಪಕ್ಕದ ಗ್ರಾಮಗಳ ಕೃಷಿ ಕ್ಷೇತ್ರಗಳಲ್ಲಿ ಓಡಲಾರಂಭಿಸಿತ್ತು.

ಆನೆ ಗಾಬರಿಯಿಂದ ಓಡುತ್ತಿದ್ದಂತೆ, ಆನೆಯನ್ನು ಹಿಂಬಾಲಿಸಿದ ಅರಣ್ಯಾಧಿಕಾರಿಗಳು ಮತ್ತು ಪಶುವೈದ್ಯರು ಟ್ರ್ಯಾಂಕ್ವಿಲೈಜರ್ ಡಾರ್ಟ್ ಅನ್ನು ಹೊಡೆಯಲು ವಿಫಲರಾದರು. ಆದರೆ ಮಧ್ಯಾಹ್ನ 2.30ರ ಸುಮಾರಿಗೆ ಎಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿ ಗ್ರಾಮದ ರೈತ ವಾಸು ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೀಡು ಬಿಟ್ಟಿದ್ದ ಆನೆಗೆ ಟ್ರ್ಯಾಂಕ್ವಿಲೈಸರ್ ನ್ನು ಯಶಸ್ವಿಯಾಗಿ ನೀಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT