ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ಭೀತಿ: ಹೈರಿಸ್ಕ್ ದೇಶಗಳಿಂದ ಬಂದವರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ!

ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ. ಇದರಂತೆ ಹೈರಿಸ್ಕ್ ರಾಷ್ಟ್ರಗಳಿಂಗ ಬರುವ ರೋಗಲಕ್ಷಣಗಳು ಇಲ್ಲದವರೂ ಕೂಡ ಇನ್ನು ಮುಂದೆ 7 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವುದನ್ನು ಕಡ್ಡಾಗೊಳಿಸಿದೆ.

ಬೆಂಗಳೂರು: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ. ಇದರಂತೆ ಹೈರಿಸ್ಕ್ ರಾಷ್ಟ್ರಗಳಿಂಗ ಬರುವ ರೋಗಲಕ್ಷಣಗಳು ಇಲ್ಲದವರೂ ಕೂಡ ಇನ್ನು ಮುಂದೆ 7 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವುದನ್ನು ಕಡ್ಡಾಗೊಳಿಸಿದೆ.

ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ, ಥಾಯ್ಲೆಂಡ್ ನಿಂದ್ ಬರುವವರಿಗಾಗಿ ಶನಿವಾರ ಪರಿಷ್ಕೃತ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಮಾರ್ಗಸೂಚಿಯಲ್ಲಿ, ಹೈರಿಸ್ಕ್ ಇರುವ ರಾಷ್ಟ್ರಗಳಿಂದ ಬರುವವರು ಆರ್'ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ನೀಡಿದರೆ ಮಾತ್ರ ವಿಮಾನ ನಿಲ್ದಾಣದಿಂದ ಹೊರ ಹೋಗಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಈ ರಾಷ್ಟ್ರಗಳಿಂಗ ಬರುವವರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್'ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ನೀಡಿದರೆ ಅವರಿಗೆ ವಿಮಾನ ನಿಲ್ದಾಣದಿಂದ ಹೊರಹೋಗಲು ಅವಕಾಶ ನೀಡಬಹುದಾಗಿದೆ. ಇವರಲ್ಲಿ ರೋಗ ಲಕ್ಷಣ ಕಂಡು ಬಂದರೆ ಅಥವಾ ಪರೀಕ್ಷೆ ವೇಳೆ ಸೋಂಕು ದೃಢಪಟ್ಟಿದ್ದೇ ಆದರೆ, ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು. ಅವರ ಸಿಟಿ ವ್ಯಾಲ್ಯೂ ಶೇ.25ಕ್ಕಿಂತ ಕಡಿಮೆ ಇದ್ದರೆ ವಂಶವಾಹಿ ಪರೀಕ್ಷೆಗೆ ಒಳಪಡಿಸಬೇಕು. ಆಸ್ಪತ್ರೆಗೆ ದಾಖಲಿಸುವಾಗ ಬೆಂಗಳೂರಿನಲ್ಲಿ ಬೌರಿಂಗ್ ಅಥವಾ ಮಂಗಳೂರಿನಲ್ಲಿ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಬೇಕು. ರೋಗ ಲಕ್ಷಣಗಳಿಲ್ಲದವರು 7 ದಿನಗಳ ಕಾಲ ಹೋಂ ಕ್ವಾರಂಟೈನ್ ಗೊಳಗಾಗಬೇಕು ಎಂದು ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT