ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ಭೀತಿ: ಹೈರಿಸ್ಕ್ ದೇಶಗಳಿಂದ ಬಂದವರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ!

ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ. ಇದರಂತೆ ಹೈರಿಸ್ಕ್ ರಾಷ್ಟ್ರಗಳಿಂಗ ಬರುವ ರೋಗಲಕ್ಷಣಗಳು ಇಲ್ಲದವರೂ ಕೂಡ ಇನ್ನು ಮುಂದೆ 7 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವುದನ್ನು ಕಡ್ಡಾಗೊಳಿಸಿದೆ.

ಬೆಂಗಳೂರು: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ. ಇದರಂತೆ ಹೈರಿಸ್ಕ್ ರಾಷ್ಟ್ರಗಳಿಂಗ ಬರುವ ರೋಗಲಕ್ಷಣಗಳು ಇಲ್ಲದವರೂ ಕೂಡ ಇನ್ನು ಮುಂದೆ 7 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವುದನ್ನು ಕಡ್ಡಾಗೊಳಿಸಿದೆ.

ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ, ಥಾಯ್ಲೆಂಡ್ ನಿಂದ್ ಬರುವವರಿಗಾಗಿ ಶನಿವಾರ ಪರಿಷ್ಕೃತ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಮಾರ್ಗಸೂಚಿಯಲ್ಲಿ, ಹೈರಿಸ್ಕ್ ಇರುವ ರಾಷ್ಟ್ರಗಳಿಂದ ಬರುವವರು ಆರ್'ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ನೀಡಿದರೆ ಮಾತ್ರ ವಿಮಾನ ನಿಲ್ದಾಣದಿಂದ ಹೊರ ಹೋಗಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಈ ರಾಷ್ಟ್ರಗಳಿಂಗ ಬರುವವರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್'ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ನೀಡಿದರೆ ಅವರಿಗೆ ವಿಮಾನ ನಿಲ್ದಾಣದಿಂದ ಹೊರಹೋಗಲು ಅವಕಾಶ ನೀಡಬಹುದಾಗಿದೆ. ಇವರಲ್ಲಿ ರೋಗ ಲಕ್ಷಣ ಕಂಡು ಬಂದರೆ ಅಥವಾ ಪರೀಕ್ಷೆ ವೇಳೆ ಸೋಂಕು ದೃಢಪಟ್ಟಿದ್ದೇ ಆದರೆ, ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು. ಅವರ ಸಿಟಿ ವ್ಯಾಲ್ಯೂ ಶೇ.25ಕ್ಕಿಂತ ಕಡಿಮೆ ಇದ್ದರೆ ವಂಶವಾಹಿ ಪರೀಕ್ಷೆಗೆ ಒಳಪಡಿಸಬೇಕು. ಆಸ್ಪತ್ರೆಗೆ ದಾಖಲಿಸುವಾಗ ಬೆಂಗಳೂರಿನಲ್ಲಿ ಬೌರಿಂಗ್ ಅಥವಾ ಮಂಗಳೂರಿನಲ್ಲಿ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಬೇಕು. ರೋಗ ಲಕ್ಷಣಗಳಿಲ್ಲದವರು 7 ದಿನಗಳ ಕಾಲ ಹೋಂ ಕ್ವಾರಂಟೈನ್ ಗೊಳಗಾಗಬೇಕು ಎಂದು ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT