ಕಾರು-ಬಸ್ ಢಿಕ್ಕಿ 
ರಾಜ್ಯ

ಅಂಕೋಲಾ ಬಳಿ ಭೀಕರ ಅಪಘಾತ; ಸಾರಿಗೆ ಬಸ್‍ಗೆ ಕಾರು ಡಿಕ್ಕಿ, ತಮಿಳುನಾಡಿನ ನಾಲ್ವರ ಸಾವು

ಹೊಸ ವರ್ಷಾಚರಣೆ ಸಂಭ್ರಮಾಚರಣೆಯ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್‍ಗೆ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

ಉತ್ತರಕನ್ನಡ: ಹೊಸ ವರ್ಷಾಚರಣೆ ಸಂಭ್ರಮಾಚರಣೆಯ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್‍ಗೆ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಬಾಳೆಗುಳಿ ಕ್ರಾಸ್ ಬಳಿ ಭಾನುವಾರ ಕಾರು ಎದುರಿನಿಂದ ಬರುತ್ತಿದ್ದ  ಸಾರಿಗೆ ಸಂಸ್ಥೆಯ ಬಸ್‍ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ.

ಮೃತರನ್ನು ತಮಿಳುನಾಡು ಮೂಲದ ಅರುಣ್ ಪಾಂಡ್ಯನ್, ನಿಫುಲ್, ಮಹ್ಮದ್ ಬಿಲ್ಲಾಲ್ ಮತ್ತು ಶೇಖರನ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ ಪ್ರವಾಸಿಗ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಹೊಸ ವರ್ಷಾಚರಣೆ ನಿಮಿತ್ತ ಗೋವಾಕ್ಕೆ ತೆರಳಿದ್ದ ಈ ಪ್ರವಸಿಗರು ಅಲ್ಲಿಂದ ಗೋಕರ್ಣಕ್ಕೆ ತೆರಳುತ್ತಿದ್ದರು. ಹೆದ್ದಾರಿ ಮಧ್ಯದ ವಿಭಜಕಕ್ಕೆ ಬಡಿದು ತದಡಿಯಿಂದ ಹುಬ್ಬಳ್ಳಿಯತ್ತ ಸಂಚರಿಸುತ್ತಿದ್ದ ಬಸ್‍ಗೆ ಡಿಕ್ಕಿಯಾಗಿದೆ’ ಎಂದು ಅಂಕೋಲಾ ಠಾಣೆ ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT