ಕಾರು-ಬಸ್ ಢಿಕ್ಕಿ 
ರಾಜ್ಯ

ಅಂಕೋಲಾ ಬಳಿ ಭೀಕರ ಅಪಘಾತ; ಸಾರಿಗೆ ಬಸ್‍ಗೆ ಕಾರು ಡಿಕ್ಕಿ, ತಮಿಳುನಾಡಿನ ನಾಲ್ವರ ಸಾವು

ಹೊಸ ವರ್ಷಾಚರಣೆ ಸಂಭ್ರಮಾಚರಣೆಯ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್‍ಗೆ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

ಉತ್ತರಕನ್ನಡ: ಹೊಸ ವರ್ಷಾಚರಣೆ ಸಂಭ್ರಮಾಚರಣೆಯ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್‍ಗೆ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಬಾಳೆಗುಳಿ ಕ್ರಾಸ್ ಬಳಿ ಭಾನುವಾರ ಕಾರು ಎದುರಿನಿಂದ ಬರುತ್ತಿದ್ದ  ಸಾರಿಗೆ ಸಂಸ್ಥೆಯ ಬಸ್‍ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ.

ಮೃತರನ್ನು ತಮಿಳುನಾಡು ಮೂಲದ ಅರುಣ್ ಪಾಂಡ್ಯನ್, ನಿಫುಲ್, ಮಹ್ಮದ್ ಬಿಲ್ಲಾಲ್ ಮತ್ತು ಶೇಖರನ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ ಪ್ರವಾಸಿಗ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಹೊಸ ವರ್ಷಾಚರಣೆ ನಿಮಿತ್ತ ಗೋವಾಕ್ಕೆ ತೆರಳಿದ್ದ ಈ ಪ್ರವಸಿಗರು ಅಲ್ಲಿಂದ ಗೋಕರ್ಣಕ್ಕೆ ತೆರಳುತ್ತಿದ್ದರು. ಹೆದ್ದಾರಿ ಮಧ್ಯದ ವಿಭಜಕಕ್ಕೆ ಬಡಿದು ತದಡಿಯಿಂದ ಹುಬ್ಬಳ್ಳಿಯತ್ತ ಸಂಚರಿಸುತ್ತಿದ್ದ ಬಸ್‍ಗೆ ಡಿಕ್ಕಿಯಾಗಿದೆ’ ಎಂದು ಅಂಕೋಲಾ ಠಾಣೆ ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಜಾನೆ ಖಾಲಿ? ಇರಾನ್ ಯುದ್ಧಕ್ಕೆ ಹಣ ನೀಡಲು ಅರಬ್ ರಾಷ್ಟ್ರಗಳಿಗೆ ಅಮೆರಿಕ ಒತ್ತಾಯ..: ವೈಟ್ ಹೌಸ್ ಹೇಳಿದ್ದೇನು?

Hormuz ತೆರೆಯದಿದ್ದರೂ ಪರವಾಗಿಲ್ಲ, ಯುದ್ಧ ಕೊನೆಯಾಗಬೇಕು..: ಇರಾನ್ ಎದುರು ಮಂಡಿಯೂರಿದ್ರಾ ಅಮೆರಿಕ ಅಧ್ಯಕ್ಷ Donald Trump?

ಬೆಂಗಳೂರಿನಲ್ಲಿ ದಾರುಣ ಘಟನೆ: ಪತಿ ಆತ್ಮಹತ್ಯೆ ಬೆನ್ನಲ್ಲೇ 17ನೇ ಮಹಡಿಯಿಂದ ಜಿಗಿದು ಪತ್ನಿ ಸಾವು!

ಇರಾನ್‌ನ ಅಣುಕೇಂದ್ರ ಇಸ್ಫಹಾನ್ ಮೇಲೆ ಅಮೆರಿಕ ದಾಳಿ; ದುಬೈ ಕರಾವಳಿಯ ತೈಲ ಟ್ಯಾಂಕರ್‌ ಹೊಡೆದು ಟೆಹ್ರಾನ್ ಪ್ರತೀಕಾರ

body-worn cams ಆಫ್ ಮಾಡಿ, ವಿನಾಕಾರಣ ವಾಹನ ತಡೆದು ಹಣ ವಸೂಲಿ: 3 ಟ್ರಾಫಿಕ್ ಪೊಲೀಸರ ಅಮಾನತು

SCROLL FOR NEXT