ಸಂಗ್ರಹ ಚಿತ್ರ 
ರಾಜ್ಯ

ಹೊಸ ವರ್ಷದ ಸಂಭ್ರದಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕಹಿ ಸುದ್ದಿ: ದೇಶದಲ್ಲಿ ನಿರುದ್ಯೋಗ ಪ್ರಮಾಣ ಗರಿಷ್ಠ ಮಟ್ಟಕ್ಕೆ ಏರಿಕೆ

ಹೊಸ ವರ್ಷದ ಸಂಭ್ರದಲ್ಲಿದ್ದ ಉದ್ಯೋಗಾಕಾಂಕ್ಷಿಗಳ ಮುಖದಲ್ಲಿ ಬೇಸರ ಮೂಡಿಸುವ ವರದಿಯೊಂದು ಇದೀಗ ಹೊರಬಿದ್ದಿದೆ. ಭಾರತದ ನಿರುದ್ಯೋಗ ದರವು ಡಿಸೆಂಬರ್‌ನಲ್ಲಿ ಶೇಕಡಾ 8.3 ಕ್ಕೆ ಏರಿದ್ದು, ಇದು 16 ತಿಂಗಳುಗಳಲ್ಲಿ ಅತ್ಯಧಿಕ ದರವಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ ಅಂಕಿ ಅಂಶಗಳು ತಿಳಿಸಿವೆ.

ಬೆಂಗಳೂರು: ಹೊಸ ವರ್ಷದ ಸಂಭ್ರದಲ್ಲಿದ್ದ ಉದ್ಯೋಗಾಕಾಂಕ್ಷಿಗಳ ಮುಖದಲ್ಲಿ ಬೇಸರ ಮೂಡಿಸುವ ವರದಿಯೊಂದು ಇದೀಗ ಹೊರಬಿದ್ದಿದೆ. ಭಾರತದ ನಿರುದ್ಯೋಗ ದರವು ಡಿಸೆಂಬರ್‌ನಲ್ಲಿ ಶೇಕಡಾ 8.3 ಕ್ಕೆ ಏರಿದ್ದು, ಇದು 16 ತಿಂಗಳುಗಳಲ್ಲಿ ಅತ್ಯಧಿಕ ದರವಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ ಅಂಕಿ ಅಂಶಗಳು ತಿಳಿಸಿವೆ.

ಇದರಲ್ಲಿ ನಗರ ನಿರುದ್ಯೋಗ ದರವು ಹಿಂದಿನ ತಿಂಗಳಿನ ಶೇಕಡಾ 8.96 ರಿಂದ ಡಿಸೆಂಬರ್‌ನಲ್ಲಿ ಶೇಕಡಾ 10.09 ಕ್ಕೆ ಏರಿದೆ. ಆದರೆ ಗ್ರಾಮೀಣ ನಿರುದ್ಯೋಗ ದರವು ಶೇಕಡಾ 7.55 ರಿಂದ ಶೇಕಡಾ 7.44 ಕ್ಕೆ ಇಳಿದಿದೆ ಎಂದು ಅಂಕಿಅಂಶ ತೋರಿಸಿದೆ.

ರಾಷ್ಟ್ರೀಯ ಅಂಕಿಅಂಶಗಳ ಕಚೇರಿ ಸಂಗ್ರಹಿಸಿದ ಮತ್ತು ನವೆಂಬರ್‌ನಲ್ಲಿ ಬಿಡುಗಡೆಯಾದ ಪ್ರತ್ಯೇಕ ತ್ರೈಮಾಸಿಕ ಮಾಹಿತಿಯ ಪ್ರಕಾರ ನಿರುದ್ಯೋಗ ದರವು ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಹಿಂದಿನ ತ್ರೈಮಾಸಿಕದಲ್ಲಿ 7.6 ಶೇಕಡಾಕ್ಕೆ ಹೋಲಿಸಿದರೆ ಶೇಕಡಾ 7.2 ಕ್ಕೆ ಇಳಿದಿದೆ ಎಂದು ತೋರಿಸಿದೆ. ಡಿಸೆಂಬರ್‌ನಲ್ಲಿ, ನಿರುದ್ಯೋಗ ದರವು ಹರಿಯಾಣದಲ್ಲಿ ಶೇಕಡಾ 37.4 ಕ್ಕೆ ಏರಿತು. ನಂತರ ರಾಜಸ್ಥಾನದಲ್ಲಿ 28.5 ಶೇಕಡಾ ಮತ್ತು ದೆಹಲಿಯಲ್ಲಿ 20.8 ಶೇಕಡಾ ಆಗಿತ್ತು ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ ಅಂಕಿಅಂಶಗಳು ತಿಳಿಸಿದೆ.

ಜಾಗತಿಕ ಮಾರುಕಟ್ಟೆಗಳಲ್ಲಿ ಪ್ರಸ್ತುತ ಈ ಬೆಳವಣಿಗೆ ಮತ್ತು ಕೋವಿಡ್ ಪ್ರಕರಣಗಳ ಹಠಾತ್ ಏರಿಕೆಯಿಂದಾಗಿಮುಂಬರುವ ತಿಂಗಳುಗಳಲ್ಲಿ ಯಾವುದೇ ಗಮನಾರ್ಹ ಹೊಸ ಉದ್ಯೋಗಾವಕಾಶಗಳ ಕಂಡು ಬರುವುದಿಲ್ಲ ಎಂದು ತಜ್ಞರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT