ಸಿದ್ದೇಶ್ವರ ಶ್ರೀಗಳು 
ರಾಜ್ಯ

8 ವರ್ಷಗಳ ಹಿಂದೆ ಗುರುಪೂರ್ಣಿಮೆಯ ದಿನ ಸಿದ್ದೇಶ್ವರ ಶ್ರೀಗಳು ಬರೆದಿದ್ದ ಅಂತಿಮ ಅಭಿವಂದನಾ ಪತ್ರದಲ್ಲಿ ಆಶಯ ಏನಿದೆ ಗೊತ್ತೇ?

ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಜ.02 ರಂದು ಸಂಜೆ ಲಿಂಗೈಕ್ಯರಾಗಿದ್ದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನಡೆಯಲಿದೆ. 

ವಿಜಯಪುರ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಜ.02 ರಂದು ಸಂಜೆ ಲಿಂಗೈಕ್ಯರಾಗಿದ್ದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನಡೆಯಲಿದೆ. 

ಅಪಾರ ಸಂಖ್ಯೆಯ ಭಕ್ತಾದಿಗಳು, ಅನುಯಾಯಿಗಳನ್ನು ಹೊಂದಿದ್ದ ಶ್ರೀಗಳ ಅಂತಿಮ ದರ್ಶನಕ್ಕೆ ಜನಸಾಗರ ಹರಿದುಬರುತ್ತಿದೆ. ಶ್ರೀಗಳ ದೇಹಾಂತ್ಯವಾದೊಡನೆ ಯೋಗಾಶ್ರಮದ ಅಧಿಕಾರಿಗಳು/ಸಿಬ್ಬಂದಿಗಳು ಶ್ರೀಗಳು 8 ವರ್ಷಗಳ ಹಿಂದೆ ಗುರುಪೂರ್ಣಿಮೆಯಂದು ಬರೆಸಿದ್ದ ಅಂತಿಮ ಅಭಿವಂದನಾ ಪತ್ರವನ್ನು ಬಹಿರಂಗಪಡಿಸಿದ್ದಾರೆ. 

ಇದರಲ್ಲಿ ಶ್ರೀಗಳು ತಮ್ಮ ಅಂತ್ಯಕ್ರಿಯೆ ಹೇಗಿರಬೇಕೆಂಬ ಸೂಚನೆಯನ್ನು ನೀಡಿದ್ದಾರೆ. ಶ್ರೀಗಳ ಅಂತಿಮ ಅಭಿವಂದನಾ ಪತ್ರದ ಸಾರಾಂಶ ಹೀಗಿದೆ.. 


"ಹಲವು ದಶಕಗಳ ಕಾಲ ಈ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ. ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಕೃತಜ್ಞತೆಯಿಂದ ಸ್ಮರಿಸಬೇಕು, ಅದಕ್ಕಾಗಿ ಈ ಅಂತಿಮ ಅಭಿವಂದನಾ ಪತ್ರ" ಎಂದು ಶ್ರೀಗಳು ಹೇಳಿದ್ದಾರೆ.

ತಮ್ಮ ದೇಹಾಂತ್ಯವಾದ ಬಳಿಕ ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯರ್ಪಿತ ಮಾಡಬೇಕು, ಶ್ರಾದ್ಧಿಕ ವಿಧಿ-ವಿಧಾನ ಕರ್ಮಗಳು ಅಗತ್ಯವಿಲ್ಲ, ತಮ್ಮ ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜನೆ ಮಾಡಬೇಕು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂದು ಶ್ರೀಗಳು ಸೂಚನೆ ನೀಡಿದ್ದಾರೆ. ಅದರಂತೆಯೇ ಅಂತ್ಯಕ್ರಿಯೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT