ಸಿದ್ದೇಶ್ವರ ಶ್ರೀಗಳು 
ರಾಜ್ಯ

8 ವರ್ಷಗಳ ಹಿಂದೆ ಗುರುಪೂರ್ಣಿಮೆಯ ದಿನ ಸಿದ್ದೇಶ್ವರ ಶ್ರೀಗಳು ಬರೆದಿದ್ದ ಅಂತಿಮ ಅಭಿವಂದನಾ ಪತ್ರದಲ್ಲಿ ಆಶಯ ಏನಿದೆ ಗೊತ್ತೇ?

ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಜ.02 ರಂದು ಸಂಜೆ ಲಿಂಗೈಕ್ಯರಾಗಿದ್ದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನಡೆಯಲಿದೆ. 

ವಿಜಯಪುರ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಜ.02 ರಂದು ಸಂಜೆ ಲಿಂಗೈಕ್ಯರಾಗಿದ್ದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನಡೆಯಲಿದೆ. 

ಅಪಾರ ಸಂಖ್ಯೆಯ ಭಕ್ತಾದಿಗಳು, ಅನುಯಾಯಿಗಳನ್ನು ಹೊಂದಿದ್ದ ಶ್ರೀಗಳ ಅಂತಿಮ ದರ್ಶನಕ್ಕೆ ಜನಸಾಗರ ಹರಿದುಬರುತ್ತಿದೆ. ಶ್ರೀಗಳ ದೇಹಾಂತ್ಯವಾದೊಡನೆ ಯೋಗಾಶ್ರಮದ ಅಧಿಕಾರಿಗಳು/ಸಿಬ್ಬಂದಿಗಳು ಶ್ರೀಗಳು 8 ವರ್ಷಗಳ ಹಿಂದೆ ಗುರುಪೂರ್ಣಿಮೆಯಂದು ಬರೆಸಿದ್ದ ಅಂತಿಮ ಅಭಿವಂದನಾ ಪತ್ರವನ್ನು ಬಹಿರಂಗಪಡಿಸಿದ್ದಾರೆ. 

ಇದರಲ್ಲಿ ಶ್ರೀಗಳು ತಮ್ಮ ಅಂತ್ಯಕ್ರಿಯೆ ಹೇಗಿರಬೇಕೆಂಬ ಸೂಚನೆಯನ್ನು ನೀಡಿದ್ದಾರೆ. ಶ್ರೀಗಳ ಅಂತಿಮ ಅಭಿವಂದನಾ ಪತ್ರದ ಸಾರಾಂಶ ಹೀಗಿದೆ.. 


"ಹಲವು ದಶಕಗಳ ಕಾಲ ಈ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ. ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಕೃತಜ್ಞತೆಯಿಂದ ಸ್ಮರಿಸಬೇಕು, ಅದಕ್ಕಾಗಿ ಈ ಅಂತಿಮ ಅಭಿವಂದನಾ ಪತ್ರ" ಎಂದು ಶ್ರೀಗಳು ಹೇಳಿದ್ದಾರೆ.

ತಮ್ಮ ದೇಹಾಂತ್ಯವಾದ ಬಳಿಕ ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯರ್ಪಿತ ಮಾಡಬೇಕು, ಶ್ರಾದ್ಧಿಕ ವಿಧಿ-ವಿಧಾನ ಕರ್ಮಗಳು ಅಗತ್ಯವಿಲ್ಲ, ತಮ್ಮ ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜನೆ ಮಾಡಬೇಕು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂದು ಶ್ರೀಗಳು ಸೂಚನೆ ನೀಡಿದ್ದಾರೆ. ಅದರಂತೆಯೇ ಅಂತ್ಯಕ್ರಿಯೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯಗೆ ನೆಚ್ಚಿನ 'ನಾಟಿ ಕೋಳಿ ಸಾರು' ಬಡಿಸಲಿರುವ ಡಿ ಕೆ ಶಿವಕುಮಾರ್: ತೀವ್ರ ಕುತೂಹಲ ಕೆರಳಿಸಿದ ಇಂದಿನ 2ನೇ ಬ್ರೇಕ್ ಫಾಸ್ಟ್ ಮೀಟಿಂಗ್ !

'ಪುರುಷ ಸಲಿಂಗಿ'ಗಳಲ್ಲಿ ಹೆಚ್ಚಿನ ಏಡ್ಸ್ ರೋಗ: ಸಚಿವ ದಿನೇಶ್ ಗುಂಡೂರಾವ್ ಕಳವಳ!

ತಾಂತ್ರಿಕ ದೋಷ: ಸುರಂಗ ಮಾರ್ಗದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು! ಪರದಾಡಿದ ಪ್ರಯಾಣಿಕರು-Video

ಮಹಿಳಾ ವಿಶ್ವಕಪ್ ಗೆದ್ದ ಬಳಿಕ ಹರ್ಮನ್ ಪ್ರೀತ್ ಕೌರ್ ಗೆ ಮತ್ತೊಂದು 'ಜಾಕ್ ಪಾಟ್'! Video

ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

SCROLL FOR NEXT