ಪ್ರಸನ್ನ ಭಟ್ 
ರಾಜ್ಯ

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ ಮೆಚ್ಚಿನ ಫೋಟೋಗ್ರಾಫರ್ ರಾಮನಗರ ಕೆರೆಯಲ್ಲಿ ಮುಳುಗಿ ಸಾವು

ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ರಾಮನಗರ: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ಪ್ರಸನ್ನ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಾವತ್ತೂರು ಕೆರೆಗೆ  ಹೊಸ ವರ್ಷಾಚರಣೆ ಮಾಡಲು ಸಹೋದರ ಕೌಶಿಕ್ ಸೇರಿ ಐವರು ಸ್ನೇಹಿತರ ಜೊತೆ ಪ್ರಸನ್ನ  ಬಂದಿದ್ದರು. ಈ ವೇಳೆ ಕೆರೆಯಲ್ಲಿ ಈಜಾಡಲು ಹೋಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಫೋಟೋಗ್ರಫಿ, ವಿಡಿಯೋಗ್ರಫಿಯಲ್ಲಿ ನಿಪುಣರಾಗಿದ್ದರು. ಕೆಲ ವರ್ಷದಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊ ಗ್ರಾಫರ್ ಆಗಿ ಕಾರ್ಯ ನಿರ್ಹಿಸುತ್ತಿದ್ದರು. ಸಂಸದ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣಗಳು, ಮೀಡಿಯಾ ವಿಭಾಗವನ್ನು ನಿರ್ವಹಣೆ ಮಾಡುತ್ತಿದ್ದರು. ಇದೆ ಕಾರಣಕ್ಕೆ ಅವರು ಸಂಸದ ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಗೆ ಆಪ್ತರಾಗಿದ್ದರು.

ಸಂಸದ ಬಿ.ವೈ.ರಾಘವೇಂದ್ರ ಅವರು ಅಧಿವೇಶನದಲ್ಲಿದ್ದು, ಪ್ರಸನ್ನ ಅವರು ರಜೆಯಲ್ಲಿದ್ದ ಕಾರಣದಿಂದಾಗಿ ಕನಕಪುರದಲ್ಲಿದ್ದ ಸ್ನೇಹಿತ ಕೌಶಿಕ್ ಮನೆಗೆ ಬಂದಿದ್ದರು.

ಮಾವತ್ತೂರು ಕೆರೆಯಲ್ಲಿ ಈಜಲು ಹೋದಾಗ ಪ್ರಸನ್ನ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಭಾನುವಾರ ರಾತ್ರಿ ಶವ ಪತ್ತೆಯಾಗಿದೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT