ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿ

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ರೂ. 8,000 ಕೋಟಿ ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ರೂ. 8,000 ಕೋಟಿ ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೂತ್ ವಿಜಯ್ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ಬೆಂಗಳೂರಿನ ಇತಿಹಾಸದಲ್ಲಿಯೇ ಕಂಡು ಕೇಳರಿಯದಂತಹ ಮಳೆ ಸುರಿಯಿತು.ಇದರಿಂದ ಸಹಜವಾಗಿಯೇ ಮೂಲಸೌಕರ್ಯಕ್ಕೆ ಹಾನಿಯಾಯಿತು. ಈ ಕಾರಣಕ್ಕಾಗಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ದಿಗಾಗಿ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು. 

ಬೂತ್ ಮಟ್ಟದ ಸಂಘಟನೆ, ಇದೊಂದು ದ್ವಿಮುಖ ಪ್ರಕ್ರಿಯೆ. ಸರ್ಕಾರಗಳ ಸಾಧನೆಯನ್ನು ತಳಮಟ್ಟದಲ್ಲಿರುವ ಬೂತ್ ಗೆ ತಿಳಿಸುವ ಜೊತೆಗೆ  ಮೂಲಭೂತ ಸಮಸ್ಯೆಗಳು ಸಹ ತಿಳಿಯುತ್ತವೆ. ಹೀಗಾಗಿ ನಮ್ಮ ವರಿಷ್ಠರು "ಬೂತ್ ಗೆದ್ದರೇ, ದೇಶ ಗೆದ್ದ ಹಾಗೆ"ಎಂದು ಹೇಳುತ್ತಾರೆ. ಬೇರೆ ಯಾವ ಪಕ್ಷಗಳು ಮಾಡದಂತಹ ಬೂತ್ ಮಟ್ಟದ ಸಂಘಟನೆಯ ಕೆಲಸವನ್ನು ಪಕ್ಷ ಮಾಡುತ್ತಿರುವುದು  ಹೆಮ್ಮೆಯ ವಿಷಯವಾಗಿದೆ ಎಂದರು. 

ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ರಾಜಕೀಯ ಪಕ್ಷವೆಂದರೇ ಅದು ಬಿಜೆಪಿ. ಇದಕ್ಕೆ ನರೇಂದ್ರ ಮೋದಿ ಯವರಂತಹ ಸಮರ್ಥ ವಿಶ್ವಮಾನ್ಯ ನಾಯಕನ ನಾಯಕತ್ವವಿದೆ. ಹೀಗಾಗಿ ಭಾರತ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ, ಸದೃಢವಾಗಿ ಮುಂದೆ ಸಾಗುತ್ತಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT