ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿ

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ರೂ. 8,000 ಕೋಟಿ ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ರೂ. 8,000 ಕೋಟಿ ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೂತ್ ವಿಜಯ್ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ಬೆಂಗಳೂರಿನ ಇತಿಹಾಸದಲ್ಲಿಯೇ ಕಂಡು ಕೇಳರಿಯದಂತಹ ಮಳೆ ಸುರಿಯಿತು.ಇದರಿಂದ ಸಹಜವಾಗಿಯೇ ಮೂಲಸೌಕರ್ಯಕ್ಕೆ ಹಾನಿಯಾಯಿತು. ಈ ಕಾರಣಕ್ಕಾಗಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ದಿಗಾಗಿ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು. 

ಬೂತ್ ಮಟ್ಟದ ಸಂಘಟನೆ, ಇದೊಂದು ದ್ವಿಮುಖ ಪ್ರಕ್ರಿಯೆ. ಸರ್ಕಾರಗಳ ಸಾಧನೆಯನ್ನು ತಳಮಟ್ಟದಲ್ಲಿರುವ ಬೂತ್ ಗೆ ತಿಳಿಸುವ ಜೊತೆಗೆ  ಮೂಲಭೂತ ಸಮಸ್ಯೆಗಳು ಸಹ ತಿಳಿಯುತ್ತವೆ. ಹೀಗಾಗಿ ನಮ್ಮ ವರಿಷ್ಠರು "ಬೂತ್ ಗೆದ್ದರೇ, ದೇಶ ಗೆದ್ದ ಹಾಗೆ"ಎಂದು ಹೇಳುತ್ತಾರೆ. ಬೇರೆ ಯಾವ ಪಕ್ಷಗಳು ಮಾಡದಂತಹ ಬೂತ್ ಮಟ್ಟದ ಸಂಘಟನೆಯ ಕೆಲಸವನ್ನು ಪಕ್ಷ ಮಾಡುತ್ತಿರುವುದು  ಹೆಮ್ಮೆಯ ವಿಷಯವಾಗಿದೆ ಎಂದರು. 

ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ರಾಜಕೀಯ ಪಕ್ಷವೆಂದರೇ ಅದು ಬಿಜೆಪಿ. ಇದಕ್ಕೆ ನರೇಂದ್ರ ಮೋದಿ ಯವರಂತಹ ಸಮರ್ಥ ವಿಶ್ವಮಾನ್ಯ ನಾಯಕನ ನಾಯಕತ್ವವಿದೆ. ಹೀಗಾಗಿ ಭಾರತ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ, ಸದೃಢವಾಗಿ ಮುಂದೆ ಸಾಗುತ್ತಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!