ಮೃತ ಪ್ರದೀಪ್ ಪತ್ನಿ ನಮಿತಾ ಜೊತೆಗೆ ಮಾತನಾಡುತ್ತಿರುವ ಸಿದ್ದರಾಮಯ್ಯ, ಸುರ್ಜೇವಾಲ, ರಾಮಲಿಂಗಾರೆಡ್ಡಿ 
ರಾಜ್ಯ

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. 

ಬೆಂಗಳೂರು: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. 

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಉದ್ಯಮವೊಂದಕ್ಕೆ ಸುಮಾರು 1.5 ಕೋಟಿ ರೂಪಾಯಿ ಬಂಡವಾಳ ಹೂಡಿದ್ದ ಪ್ರದೀಪ್ ಗೆ ನಯಾಪೈಸೆ ಲಾಭದ ಹಣ ಕೈಸೇರಿಲ್ಲ. ಈ ವಿವಾದದಲ್ಲಿ ಶಾಸಕ ಅರವಿಂದ ಲಿಂಬಾವಳಿ ಮಧ್ಯಸ್ಥಿಕೆ ವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಪತಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ಸಾಲಮಾಡಿ ಹೂಡಿಕೆ ಮಾಡಿದ್ದ ಹಣ ವಾಪಸು ಕೊಡಿಸಬೇಕು ಎಂಬುದು ಮೃತ ಪ್ರದೀಪ್ ಪತ್ನಿ ನಮಿತಾ ಅವರ ಮನವಿ. ಪೊಲೀಸ್ ಇಲಾಖೆ ತಕ್ಷಣ ಕ್ರಮವಹಿಸಿ, ಈ ಹಣವನ್ನು ವಾಪಾಸು ಕೊಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಡೆತ್ ನೋಟ್ ನಲ್ಲಿ ಅರವಿಂದ ಲಿಂಬಾವಳಿ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ?ಪೊಲೀಸರು ಮಧ್ಯರಾತ್ರಿಯಲ್ಲಿ ಮೃತನ ಮೊಬೈಲ್ ಕೊಡಿ ಎಂದು ಕುಟುಂಬದವರ ಬಳಿ ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ ಡೆತ್ ನೋಟ್ ನಲ್ಲಿ ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ. 

ಈ ಹಿಂದೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ ಸೂಕ್ತ ತನಿಖೆ ನಡೆಸದೆ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ. ಈ ಪ್ರಕರಣವು ಅದೇ ರೀತಿ ಆಗುವುದು ಬೇಡ. ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ