ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಹರಿದುಬರುತ್ತಿರುವ ಜನಸಾಗರ. 
ರಾಜ್ಯ

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತರು; ಇಂದು ಸಂಜೆ ಅಂತ್ಯಕ್ರಿಯೆ

ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ.

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್‌ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸಂಜೆ 5 ಗಂಟೆಯ ನಂತರ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಮಠಾಧೀಶರು, ರಾಜ್ಯ ಮತ್ತು ಕೇಂದ್ರ ಸರಕಾರದ ಸಚಿವರು, ಶಾಸಕರು ಹಾಗು ಅಪಾರ ಭಕ್ತ ಸಮೂಹ ಈ ಸಂದರ್ಭದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

ನಾಡು ಕಂಡ ಪ್ರಸಿದ್ಧ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಸಿದ್ದೇಶ್ವರ ಶ್ರೀಗಳ ಮೃತದೇಹದ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಶ್ರೀಗಳ ಅಗಲಿಕೆಯ ಗೌರವಾರ್ಥ ವಿಜಯಪುರ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಶ್ರೀಗಳ ಅಂತಿಮ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ನಿರ್ದೇಶಿಸಿದೆ. ಅಂತಿಮ ದರ್ಶನಕ್ಕೆ ಭಕ್ತರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ಸರ್ಕಾರ ರಜೆ ಘೋಷಿಸಿದೆ. ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತವು ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಜ್ಞಾನಯೋಗಾಶ್ರಮದಿಂದ ಸೈನಿಕ ಶಾಲೆಯವರೆಗೆ ತರಲಿದೆ. ಬೆಳಗ್ಗೆ 6.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿಜಯಪುರ ನಗರದ ಸೈನಿಕ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನಕ್ಕಾಗಿ ಸೋಲಾಪುರ, ಕಲಬುರಗಿ, ಸಿಂದಗಿ, ಬಾಗಲಕೋಟೆ, ಜಮಖಂಡಿ, ಅಥಣಿಯಿಂದ ಆಗಮಿಸುವ ಭಕ್ತಾದಿಗಳು ನೇರವಾಗಿ ವಿಜಯಪುರ ನಗರದ ರಿಂಗ್ ರೋಡ್ ಮೂಲಕ (ಇಟಗಿ ಪೆಟ್ರೋಲ್ ಪಂಪ್) ಜಿಲ್ಲಾ ಆಸ್ಪತ್ರೆಯ ಹಿಂಭಾಗದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಸ್ಥಳದಲ್ಲಿಯೇ ಭಕ್ತರಿಗೆ ಪ್ರಸಾದ, ನೀರು, ಇನ್ನಿತರೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸೈನಿಕ ಶಾಲೆಯ ಎದುರುಗಡೆ ಇರುವ ನೇತಾಜಿ ಸುಭಾಷ್ ಚಂದ್ರ ಬೋಸ್, ರಸ್ತೆಯ ಮೂಲಕ ನಡೆದುಕೊಂಡು ಸೈನಿಕ ಶಾಲೆಯ ಮುಖ್ಯ ದ್ವಾರದ ಮೂಲಕ ಪ್ರವೇಶಿಸಬೇಕು. ದರ್ಶನದ ನಂತರ ಸೈನಿಕ ಶಾಲೆಯ 2ನೇ ಗೇಟ್ ಮೂಲಕ (ಲೆಫ್ಟಿನೆಂಟ್ ಕರ್ನಲ್ ಅಜಿತ್ ಭಂಡಾರಕರ ದ್ವಾರ) ಹೊರಗಡೆ ಬಂದು ತಮ್ಮ ವಾಹನ ಮೂಲಕ ವಾಪಸ್ ತೆರಳಬೇಕು. ಸೈನಿಕ ಶಾಲೆಯಲ್ಲಿ ಮಧ್ಯಾಹ್ನ 3.00 ಗಂಟೆಯಿಂದ ಸಾಯಂಕಾಲ 4.00 ಗಂಟೆಯ ಅವಧಿಯಲ್ಲಿ ಸರ್ಕಾರದ ವತಿಯಿಂದ ಸಕಲ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.

ಸಂಜೆ 4.00 ಗಂಟೆಯಿಂದ ಪುನಃ ತೆರೆದ ವಾಹನದಲ್ಲಿ ಪಾರ್ಥಿವ ಶರೀರವನ್ನು ಸೈನಿಕ ಶಾಲೆಯಿಂದ ಜ್ಞಾನಯೋಗಾಶ್ರಮಕ್ಕೆ ತರಲಾಗುವುದು. (ಮಾರ್ಗ: ಗೋದಾವರಿ-ಶ್ರೀ ಶಂಕರಲಿಂಗ ದೇವಸ್ಥಾನ-ಶಿವಾಜಿವೃತ್ತ - ಗಾಂಧಿವೃತ್ತ- ಶ್ರೀ ಸಿದ್ದೇಶ್ವರ ದೇವಸ್ಥಾನ-ಬಿ.ಎಲ್.ಡಿ.ಇ. ಆಸ್ಪತ್ರೆ-ಶ್ರೀ ಜ್ಞಾನಯೋಗಾಶ್ರಮ) ಭಕ್ತಾದಿಗಳು ರಸ್ತೆಯ ಇಕ್ಕೆಲೆಗಳಲ್ಲಿ ನಿಂತುಕೊಂಡು ಅಂತಿಮ ನಮನ ಸಲ್ಲಿಸಬಹುದು. ಅಂತಿಮ ಕ್ರಿಯೆಯನ್ನು ಸಂಜೆ 5.00 ಗಂಟೆಗೆ ಆಶ್ರಮದ ಆವರಣದಲ್ಲಿ ವಿಧಿವಿಧಾನಗಳಂತೆ ನೇರವೇರಿಸಲಾಗುತ್ತದೆ. ಆಶ್ರಮದ ಆವರಣದಲ್ಲಿ ಸ್ಥಳಾವಕಾಶದ ಅಭಾವವಿದ್ದು ಭಕ್ತಾದಿಗಳು ಸೈನಿಕ ಶಾಲೆಯಲ್ಲಿಯೇ ಅಂತಿಮ ದರ್ಶನ ಪಡೆಯಬೇಕು. ಯಾವುದೇ ಆತಂತಕ್ಕೆ ಒಳಗಾಗದೇ ಶಾಂತ ರೀತಿಯಿಂದ ವರ್ತಿಸಿ, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

82 ವರ್ಷದ ಪಾಂಡಿತ್ಯಪೂರ್ಣ ತತ್ವಜ್ಞಾನಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಕಳೆದ ಕೆಲದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಸ್ಪತ್ರೆಗೆ ಸೇರಲಿಚ್ಚಿಸದ ಅವರಿಗೆ ಜ್ಞಾನಯೋಗಾಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ತಜ್ಞ ವೈದ್ಯರ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ, ವೈಕುಂಠ ಏಕಾದಶಿಯ ಪುಣ್ಯ ದಿನದಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಸಿದ್ದೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯಗೆ ನೆಚ್ಚಿನ 'ನಾಟಿ ಕೋಳಿ ಸಾರು' ಬಡಿಸಲಿರುವ ಡಿ ಕೆ ಶಿವಕುಮಾರ್: ತೀವ್ರ ಕುತೂಹಲ ಕೆರಳಿಸಿದ ಇಂದಿನ 2ನೇ ಬ್ರೇಕ್ ಫಾಸ್ಟ್ ಮೀಟಿಂಗ್ !

'ಪುರುಷ ಸಲಿಂಗಿ'ಗಳಲ್ಲಿ ಹೆಚ್ಚಿನ ಏಡ್ಸ್ ರೋಗ: ಸಚಿವ ದಿನೇಶ್ ಗುಂಡೂರಾವ್ ಕಳವಳ!

ತಾಂತ್ರಿಕ ದೋಷ: ಸುರಂಗ ಮಾರ್ಗದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು! ಪರದಾಡಿದ ಪ್ರಯಾಣಿಕರು-Video

ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

ಮಾಜಿ ಸಿಎಂ ಎಸ್ ಎಂ ಕೃಷ್ಣಾಗೆ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದ ಆರ್ ವಿ ದೇವರಾಜ್!

SCROLL FOR NEXT