ಪಂಚಭೂತಗಳಲ್ಲಿ ಸಿದ್ದೇಶ್ವರ ಶ್ರೀಗಳು ಲೀನ 
ರಾಜ್ಯ

ಪಂಚಭೂತಗಳಲ್ಲಿ ಸಿದ್ದೇಶ್ವರ ಶ್ರೀಗಳು ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

ನೆನ್ನೆ ಇಹಲೋಕ ತ್ಯಜಿಸಿದ್ದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ಇಂದು ಆಶ್ರಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಶ್ರೀಗಳ ಇಚ್ಛೆಯಂತೆಯೇ ನೆರವೇರಿಸಲಾಯಿತು. 

ವಿಜಯಪುರ: ನೆನ್ನೆ ಇಹಲೋಕ ತ್ಯಜಿಸಿದ್ದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ಇಂದು ಆಶ್ರಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಶ್ರೀಗಳ ಇಚ್ಛೆಯಂತೆಯೇ ನೆರವೇರಿಸಲಾಯಿತು. 

ಅಂತಿಮ ದರ್ಶನ ಮುಕ್ತಾಯಗೊಂಡ ಬಳಿಕ ವಿಜಯಪುರದ ಸೈನಿಕ ಶಾಲೆಯಿಂದ ಆಶ್ರಮಕ್ಕೆ ಶ್ರೀಗಳವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ತರಲಾಯಿತು.  

ಆಶ್ರಮದ ಆವರಣದಲ್ಲಿ ನಿರ್ಮಿಸಿದ್ದ ವೇದಿಕೆಯ ಮೇಲೆ ಶ್ರೀಗಳವರ ಪಾರ್ಥಿವ ಶರೀರವನ್ನಿರಿಸಿ ಆಶ್ರಮದ ಆವರಣದಲ್ಲಿ ಹಲವು ಮಠಾಧೀಶರ ನೇತೃತ್ವದಲ್ಲಿ ಅಂತ್ಯ ಸಂಸ್ಕಾರ ನಡೆಯಿತು. 

ಶ್ರೀಗಳವರ ಇಚ್ಛೆಯಂತೆ ಸರಳವಾಗಿ ಅಂತ್ಯಕ್ರಿಯೆ ನಡೆದಿದ್ದು  ಸುತ್ತೂರು ಶ್ರೀ,  ಕನ್ಹೇರಿ ಶ್ರೀ ಬಸವಲಿಂಗ ಶ್ರೀಗಳವರಿಂದ ಸಿದ್ದೇಶ್ವರ ಸ್ವಾಮೀಜಿಗಳ ಚಿತೆಗೆ ಅಗ್ನಿಸ್ಪರ್ಶವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಮಠಾಧೀಶರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಚಿವರು, ಶಾಸಕರು ಹಾಗು ಅಪಾರ ಭಕ್ತರು ಶ್ರೀಗಳವರಿಗೆ ಅಂತಿಮನ ನಮನ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT