ಸಂಗ್ರಹ ಚಿತ್ರ 
ರಾಜ್ಯ

72 ವರ್ಷದ ವೃದ್ಧ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ 8.08 ಲಕ್ಷ ರೂ. ವಂಚನೆ: ನಕಲಿ ಆಯುರ್ವೇದ ವೈದ್ಯನ ಬಂಧನ

72 ವರ್ಷದ ವೃದ್ಧ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ ವ್ಯಕ್ತಿಯೊಬ್ಬನಿಗೆ 8.08 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ರಾಜಸ್ಥಾನದ ನಕಲಿ ಆಯುರ್ವೇದ ವೈದ್ಯ, ಆತನ ಮಗ ಮತ್ತು ಸಹಚರನನ್ನು ವಿಲ್ಸನ್ ಗಾರ್ಡನ್ ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: 72 ವರ್ಷದ ವೃದ್ಧ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ ವ್ಯಕ್ತಿಯೊಬ್ಬನಿಗೆ 8.08 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ರಾಜಸ್ಥಾನದ ನಕಲಿ ಆಯುರ್ವೇದ ವೈದ್ಯ, ಆತನ ಮಗ ಮತ್ತು ಸಹಚರನನ್ನು ವಿಲ್ಸನ್ ಗಾರ್ಡನ್ ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ಸಮೀನ್ ಅಲಿಯಾಸ್ ಡಾ ಮಲಿಕ್ ಅಲಿ (50), ಈತನ ಮಗ ಸೈಫ್ ಅಲಿ (25) ಮತ್ತು ಮೊಹಮ್ಮದ್ ರಹೀಸ್ (55) ಬಂಧಿತ ವ್ಯಕ್ತಿಗಳಾಗಿದ್ದಾರೆ.

ಶಾಂತಿನಗರ ನಿವಾಸಿ ಪಂಕಜ್ ರಾಥೋಡ್ ಆರೋಪಿ ವಿರುದ್ಧ ದೂರು ದಾಖಲಿಸಿದ್ದರು. ಸಮೀನ್ 72 ವರ್ಷದ ನನ್ನ ತಾಯಿಗೆ ಚಿಕಿತ್ಸೆ ಕೊಡುವುದಾಗಿ ಹೇಳಿ ಮನೆಗೆ ಬಂದಿದ್ದರು. ತಾಯಿಯ ಕಾಲಿನಿಂದ ಸ್ವಲ್ಪ ಕೀವು ತೆಗೆದು, ಇನ್ನೂ ಕೆಲವು ಬಾರಿ ಚಿಕಿತ್ಸೆ ನೀಡುವುದಾಗಿ ಹೇಳಿ ಹೋಗಿದ್ದರು. ಈ ವೇಳೆ ಹಣವನ್ನು ಪಡೆದುಕೊಂಡಿದ್ದರು. ಆದರೆ, ನಂತರ ಕೈಗೆ ಸಿಕ್ಕಿರಲಿಲ್ಲ ಎಂದು ರಾಥೋಡ್ ಅವರು ಹೇಳಿದ್ದಾರೆ.

ಆರೋಪಿಗಳು ಒಬ್ಬ ವ್ಯಕ್ತಿಗೆ ವಂಚನೆ ನೀಡಿದ ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದರು. ದೂರು ಹಿನ್ನೆಲೆಯಲ್ಲಿ ಆರೋಪಿಗಳು ನೆಲಮಂಗಲದಲ್ಲಿರುವ ಕುರಿತು ಮಾಹಿತಿ ತಿಳಿದುಬಂದಿತ್ತು. ಅಕ್ರಮವಾಗಿ ಹಣ ಗಳಿದ ಆರೋಪಿಗಳು ಅದ್ದೂರಿಯಾಗಿ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನೆಲಮಂಗಲದ ರಸ್ತೆ ಬದಿಯ ತಾತ್ಕಾಲಿಕ ಶೆಡ್‌ನಲ್ಲಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಯಿತು. ಚಿಕಿತ್ಸೆಗೆ ಬಳಸಿದ್ದ ವಸ್ತುಗಳು, 3.5 ಲಕ್ಷ ರೂಪಾಯಿ ನಗದು, ನಾಲ್ಕು ಕಾರುಗಳು ಮತ್ತು ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT