ಹತ್ಯೆಯಾದ ಯುವತಿ ಹಾಗೂ ಕಲ್ಯಾಣ್. 
ರಾಜ್ಯ

ಯುವತಿಗೆ ಚೂರಿ ಇರಿದು ತಾನೂ ಇರಿದುಕೊಂಡಿದ್ದ ಭಗ್ನ ಪ್ರೇಮಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ: ಪೊಲೀಸರು

ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಯುವತಿಗೆ ಚೂರಿ ಇರಿದು, ತಾನೂ ಕೂಡ ಚೂರಿ ಇರಿದುಕೊಂಡಿದ್ದ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಯುವತಿಗೆ ಚೂರಿ ಇರಿದು, ತಾನೂ ಕೂಡ ಚೂರಿ ಇರಿದುಕೊಂಡಿದ್ದ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜಾನುಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿಟೆಕ್ ಮಾಡುತ್ತಿದ್ದ 19 ವರ್ಷದ ಲಯಸ್ಮಿತಾ ಎಂಬ ವಿದ್ಯಾರ್ಥಿನಿಗೆ ಕಲ್ಯಾಣ್ ಚಾಕುವಿನಿಂದ ಇರಿದಿದ್ದ. ಯುವತಿಯ ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದಿದ್ದ. ಬಳಿಕ ತನಗೂ ಚಾಕುವಿನಿಂದ ಇರಿದುಕೊಂಡಿದ್ದ.

ನಂತರ ಗಂಭೀರವಾಗಿ ಗಾಯಗೊಂಡಿದ್ದ ಆರೋಪಿಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯುವಕನಿಗೆ ಇರಿತದ ಗಾಯವು ಆಳವಾಗಿಲ್ಲ. ಇದೀಗ ಆತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಆದರೆ, ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕ ಚೇತರಿಸಿಕೊಳ್ಳಲು ನಾವು ಕಾಯುತ್ತಿದ್ದೇವೆ. ಚೇತರಿಸಿಕೊಂಡ ಬಳಿಕ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತದೆ. ನಂತರ ಬಂಧನದ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದಿದ್ದಾರೆ.

ಏತನ್ಮಧ್ಯೆ, ಸಂತ್ರಸ್ತೆಯ ಪೋಷಕರ ದೂರಿನ ಮೇರೆಗೆ ಪೊಲೀಸರು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ನಿರ್ಲಕ್ಷ್ಯದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಮೃತ ವಿದ್ಯಾರ್ಥಿನಿ ಲಯಸ್ಮಿತಾ ಮತ್ತು ಆರೋಪಿ ಕಲ್ಯಾಣ್ ಸಂಬಂಧಿಕರಾಗಿದ್ದು, ಪರಸ್ಪರ ಸಂಪರ್ಕದಲ್ಲಿದ್ದರು. ಲಯಸ್ಮಿತಾಗೆ ಕಲ್ಯಾಣ್ ತನ್ನ ಪ್ರೇಮ ನಿವೇದನೆಯನ್ನು ಮುಂದಿಟ್ಟಿದ್ದು, ಇದಕ್ಕೆ ಆಕೆ ನಿರಾಕರಿಸಿದ್ದಳು. ಇದರಿಂದ ಕುಪಿತನಾಗಿದ್ದ ಕಲ್ಯಾಣ್ ಆಕೆಗೆ ಚೂರಿ ಇರಿದು ಹತ್ಯೆ ಮಾಡಿದ್ದಾನೆಂದು ಪೊಲೀಸರು ಖಚಿತಪಡಿಸಿದ್ದಾರೆ.

ವಿದ್ಯಾರ್ಥಿನಿಗೆ ಆರೋಪಿ 5 ಬಾರಿ ಇರಿದಿದ್ದು, ಎದೆಯ ಭಾಗಕ್ಕೆ ಹಲವು ಬಾರಿ ಇರಿದ ಕಾರಣ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮತ್ತ ಎಷ್ಟೇ ಬೆರಳು ತೋರಿದರೂ, ಅಲ್ಪಸಂಖ್ಯಾತರ ಮೇಲೆ ನಿಮ್ಮ ದೌರ್ಜನ್ಯ ಮುಚ್ಚಿಡಲು ಸಾಧ್ಯವಿಲ್ಲ- ಪಾಕ್ ಗೆ ಭಾರತದ ತಿರುಗೇಟು!

ಅನಧಿಕೃತ ಮನೆಗಳ ತೆರವು: ಕೋಗಿಲು ಲೇಔಟ್​​ಗೆ ಡಿ.ಕೆ ಶಿವಕುಮಾರ್ ಭೇಟಿ; ಡಿಸಿಎಂ ಹೇಳಿದ್ದೇನು? Video

ಬೆಂಗಳೂರು: ಕಿರುತೆರೆ ನಟಿ ನಂದಿನಿ ಆತ್ಮಹತ್ಯೆಗೆ ಶರಣು

ಮಾದಕ ವಸ್ತು ತಡೆ: ನಿರ್ಲಕ್ಷ್ಯಕ್ಕಾಗಿ ಮೂವರು ಇನ್ಸ್‌ಪೆಕ್ಟರ್‌ಗಳ ಅಮಾನತು

ಲಂಕಾ ಹನಿಮೂನ್ ನಲ್ಲಿ 'ಹಳೇ ಲವರ್' ವಿಚಾರಕ್ಕೆ ಜಗಳ! ನವದಂಪತಿ ಸೂಸೈಡ್ ಗೆ ಇದೇ ಕಾರಣನಾ? ಕಣ್ಣೀರಿನಲ್ಲಿ ಮುಳುಗಿದ ಕುಟುಂಬ!

SCROLL FOR NEXT