ಸಂಗ್ರಹ ಚಿತ್ರ 
ರಾಜ್ಯ

ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ: ರೇಬಿಸ್‌ ನಿರೋಧಕ ಲಸಿಕೀಕರಣ ಕಾರ್ಯ ಚುರುಕುಗೊಳಿಸಿದ ಬಿಬಿಎಂಪಿ

ಇತ್ತೀಚೆಗೆ ಆರ್‌ಆರ್‌ನಗರ ವಲಯದಲ್ಲಿ ಎಂಟು ವರ್ಷದ ಮಗುವಿಗೆ ನಾಯಿ ಕಚ್ಚಿದ ಪ್ರಕರಣ ಬಳಿಕ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದ್ದು, ಬೀದಿ ನಾಯಿಗಳಿಗೆ ರೇಬಿಸ್ ವಿರೋಧಿ ಲಸಿಕೆ ನೀಡುವ ಕಾರ್ಯವನ್ನು ಚುರುಕುಗೊಳಿಸಿದೆ.

ಬೆಂಗಳೂರು: ಇತ್ತೀಚೆಗೆ ಆರ್‌ಆರ್‌ನಗರ ವಲಯದಲ್ಲಿ ಎಂಟು ವರ್ಷದ ಮಗುವಿಗೆ ನಾಯಿ ಕಚ್ಚಿದ ಪ್ರಕರಣ ಬಳಿಕ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದ್ದು, ಬೀದಿ ನಾಯಿಗಳಿಗೆ ರೇಬಿಸ್ ವಿರೋಧಿ ಲಸಿಕೆ ನೀಡುವ ಕಾರ್ಯವನ್ನು ಚುರುಕುಗೊಳಿಸಿದೆ.

ಪಾಲಿಕೆಯ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಪ್ರಾಣಿಗಳ ಜನನ ನಿಯಂತ್ರಣ ಕ್ರಮಗಳನ್ನು ಹೆಚ್ಚಿಸುವ ಕುರಿತು ಪ್ರಯತ್ನಗಳನ್ನು ನಡೆಸಲಾಗಿದೆ ಎಂದು ಹೇಳಿದ್ದಾರೆ.

ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಪಾಲಿಕೆಯು 63,324 ನಾಯಿಗಳಿಗೆ ಲಸಿಕೆ ಹಾಕಿದ್ದು, 32,626 ಬೀದಿ ಮತ್ತು ಸಮುದಾಯದ ನಾಯಿಗಳಿಗೆ ಪ್ರಾಣಿ ಜನನ ನಿಯಂತ್ರಣ (ಎಬಿಸಿ) ಕ್ರಮಗಳನ್ನು ಕೈಗೊಂಡಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ಅವರು ಮಾಹಿತಿ ನೀಡಿದ್ದಾರೆ.

ಪ್ರಾಣಿಗಳ ಜನನ ನಿಯಂತ್ರಣ ಕ್ರಮಗಳನ್ನು ಹೆಚ್ಚಿಸಲು ಹೆಚ್ಚಿನ ಸಂಸ್ಥೆಗಳಿಗೆ ಅನುಮತಿ ನೀಡುವಂತೆ ಪಾಲಿಕೆಯು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಗೆ ಪತ್ರ ಬರೆದಿದೆ ಎಂದು ತಿಳಿಸಿದ್ದಾರೆ.

ಪಶುಸಂಗೋಪನಾ ಇಲಾಖೆಯ ಬಿಬಿಎಂಪಿ ಸಹಾಯಕ ನಿರ್ದೇಶಕ ಮಂಜುನಾಥ ಶಿಂಧೆ ಅವರು ಮಾತನಾಡಿ, ಬೀದಿನಾಯಿಗಳಿಂದಷ್ಟೇ ಅಲ್ಲದೆ, ಸಮುದಾಯ ಮತ್ತು ಸಾಕುನಾಯಿಗಳಿಂದಲೂ ಸಮಸ್ಯೆಗಳು ಕಂಡು ಬರುತ್ತಿವೆ ಎಂದಿದ್ದಾರೆ.

ನಾಯಿಗಳನ್ನು ಚುಡಾಯಿಸುವುದು, ಕಲ್ಲು ಎಸೆಯುವುದು, ರಸ್ತೆಗಳ ಮೂಲೆಗಳಲ್ಲಿ ಕಸ ಎಸೆಯುವುದು, ನಾಯಿಮರಿಗಳ ಬಳಿ ಹೋಗುವುದನ್ನು ಜನರು ತಪ್ಪಿಸಬೇಕು, ನಾಯಿ ಮರಿಗಳ ಬಳಿ ಹೋಗುವುದು ಅದರ ತಾಯಿಗೆ ಕೋಪವನ್ನುಂಟು ಮಾಡಿದಂತಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜುಲೈ 2022ರ ವರೆಗೆ 6,000 ನಾಯಿ ಕಡಿತಗಳ ಪ್ರಕರಣಗಳು ವರದಿಯಾಗಿದೆ.

ಕೆಲ ವರ್ಷಗಳ ಹಿಂದೆ, ಯಲಹಂಕದಲ್ಲಿ ಆರು ವರ್ಷದ ಬಾಲಕ ಹೇಮಂತ್ ಕುಮಾರ್ ರೇಬಿಸ್‌ನಿಂದ ಸಾವನ್ನಪ್ಪಿದ್ದ, ನಾಯಿ ಕಚ್ಚಿದ್ದರೂ ಕೂಡ ಬಾಲಕ ತನ್ನ ಪೋಷಕರ ಬಳಿ ಈ ವಿಚಾರವನ್ನು ತಿಳಿಸದೆ ಮುಚ್ಚಿಟ್ಟಿದ್ದ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT