ಸಂಗ್ರಹ ಚಿತ್ರ 
ರಾಜ್ಯ

ಪಿಎಸ್ಐ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನು ಮಂಜೂರು

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪಿಎಸ್​ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

ಕಲಬುರಗಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪಿಎಸ್​ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

ಕಿಂಗ್​ಪಿನ್ ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಡಿವೈಎಸ್​ಪಿ ಮಲ್ಲಿಕಾರ್ಜುನ ಸೇರಿದಂತೆ 26 ಜನರಿಗೆ ಕಲಬುರಗಿ ಸೆಷನ್ಸ್ ಕೋರ್ಟ್​ ಜಡ್ಜ್​ ಕೆ.ಬಿ.ಪಾಟೀಲ್ ಜಾಮೀನು ನೀಡಿದ್ದಾರೆ.

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಈವರೆಗೆ 36 ಜನರಿಗೆ ಜಾಮೀನು ಸಿಕ್ಕಿದೆ. 8 ಅಭ್ಯರ್ಥಿಗಳು, 5 ಪರೀಕ್ಷಾ ಮೇಲ್ವಿಚಾರಕಿಯರು, 3 ಪೊಲೀಸ್ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು ಸೇರಿ 26 ಜನರಿಗೆ ಜಾಮೀನು ನೀಡಲಾಗಿದೆ.

ರಾಜ್ಯದಲ್ಲಿ 2021 ರ ಅಕ್ಟೋಬರ್ ತಿಂಗಳಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆದಿತ್ತು. ಆದರೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಬೆಳಕಿಗೆ ಬಂದಿತ್ತು. ಹೀಗಾಗಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿತ್ತು. 2022 ರ ಎಪ್ರಿಲ್ 8 ರಂದು ಕಲಬುರಗಿ ಚೌಕ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ತನಿಖೆ ಆರಂಭಿಸಿದ್ದ ಸಿಐಡಿ ಪೊಲೀಸರು ಇಲ್ಲಿವರಗೆ 53 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ