ಎನ್ಐಎ 
ರಾಜ್ಯ

ಶಿವಮೊಗ್ಗದಲ್ಲಿ ಐಎಸ್ಐಎಸ್ ಚಟುವಟಿಕೆ ಪ್ರಕರಣ: ಮಂಗಳೂರು ವಿದ್ಯಾರ್ಥಿ ಸೇರಿ ಇಬ್ಬರು ಎನ್ಐಎ ವಶಕ್ಕೆ

ಎನ್ಐಎ ಅಧಿಕಾರಿಗಳು ಜ.05 ರಂದು ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ ಹಾಗೂ ಬೆಂಗಳೂರು ಸೇರಿ 6 ಸ್ಥಳಗಳಲ್ಲಿ ಶೋಧಕಾರ್ಯಾಚರಣೆ ನಡೆಸಿದ್ದು ಪ್ರಕರಣದ ಸಂಬಂಧ ಓರ್ವ ವಿದ್ಯಾರ್ಥಿ ಸೇರಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಜ.05 ರಂದು ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ ಹಾಗೂ ಬೆಂಗಳೂರು ಸೇರಿ 6 ಸ್ಥಳಗಳಲ್ಲಿ ಶೋಧಕಾರ್ಯಾಚರಣೆ ನಡೆಸಿದ್ದು ಪ್ರಕರಣದ ಸಂಬಂಧ ಓರ್ವ ವಿದ್ಯಾರ್ಥಿ ಸೇರಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣ ಕಳೆದ ವರ್ಷ ಸೆ.19 ರಂದು ಶಿವಮೊಗ್ಗದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಭಾರತದಲ್ಲಿ, ನಿಷೇಧಿತ ಉಗ್ರ ಸಂಘಟನೆ ಐಎಸ್ ನ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸುವುದು ಹಾಗೂ ದೇಶದ ಭದ್ರತೆ, ಸಾರ್ವಭೌಮತೆಗೆ ಧಕ್ಕೆ ಉಂಟುಮಾಡುವ ಯೋಜನೆ, ಪಿತೂರಿಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು. ಬಂಧಿತ ವ್ಯಕ್ತಿಗಳನ್ನು ರೆಷಾನ್ ತಜುದ್ದೀನ್ ಶೇಖ್ (ಉಡುಪಿಯ ಬ್ರಹ್ಮಾವರದ ಶಾಂತಿನಗರದ ನಿವಾಸಿ ತಜುದ್ದೀನ್ ಶೇಖ್ ಪುತ್ರ)  ಶಿವಮೊಗ್ಗದ ಟಿಪ್ಪು ಸುಲ್ತಾನ್ ನಗರದ ಬಶೀರ್ ಬೇಗ್ ಎಂಬಾತನ ಪುತ್ರ ಹುಜೈರ್ ಫರ್ಹಾನ್ ಬೇಗ್ ಎಂದು ಗುರುತಿಸಲಾಗಿದೆ. 

ಎನ್ಐಎ ತನಿಖೆಯಲ್ಲಿ ಆರೋಪಿ ಮಾಜ್ ಮುನೀರ್ ಎಂಬಾತ ತನ್ನ ಸಹಪಾಠಿ ಹಾಗೂ ಆಪ್ತ ರೇಶಾನ್ ತಜುದ್ದೀನ್ ಎಂಬಾತನನ್ನು ಉಗ್ರ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ ಹಾಗೂ ರೇಶಾನ್ ತಜುದ್ದೀನ್ ಶೇಖ್, ಹುಜೈರ್ ಫರ್ಹಾನ್ ಬೇಗ್ ಐಎಸ್ಐಎಸ್ ಹ್ಯಾಂಡ್ಲರ್ ನಿಂದ ಕ್ರಿಪ್ಟೋ ವ್ಯಾಲೆಟ್ ಮೂಲಕ ಉಗ್ರ ಚಟುವಟಿಕೆಗಳಿಗೆ ನಿಧಿ ಸಂಗ್ರಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ತಮ್ಮ ಹಿಂಸಾತ್ಮಕ ದೀರ್ಘಾವಧಿಯ ಯೋಜನೆಗಳ ಭಾಗವಾಗಿ ಈ ವ್ಯಕ್ತಿಗಳು ಮದ್ಯದ ಅಂಗಡಿಗಳು, ಗೋಡೌನ್‌ಗಳು, ಟ್ರಾನ್ಸ್‌ಫಾರ್ಮರ್‌ಗಳಂತಹ ವಾಹನಗಳು ಮತ್ತು ಇತರ ಸಂಸ್ಥೆಗಳಿಗೆ ಬೆಂಕಿ ಹಚ್ಚುವುದು ಮತ್ತಿತರ ಹಿಂಸಾತ್ಮಕ ಕೃತ್ಯಗಳನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಗುರುವಾರ ಶೋಧಕಾರ್ಯಾಚರಣೆ ನಡೆಸಿದಾಗ ಡಿಜಿಟಲ್ ಉಪಕರಣಗಳು ಹಾಗೂ ದೋಷಾರೋಪಣೆಗೆ ಪೂರಕವಾಗುವ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT