ಎಪಿಎಸ್ ಎಜುಕೇಶನ್ ಫೌಂಡೇಶನ್ ಬೆಂಗಳೂರಿನಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಬ್ರೈಲ್ ದಿನಾಚರಣೆಯ ಸಂದರ್ಭದಲ್ಲಿ ದೃಷ್ಟಿಹೀನತೆ ಹೊಂದಿರುವ ವಿದ್ಯಾರ್ಥಿಗಳು ಹೊಸದಾಗಿ ಬಿಡುಗಡೆಯಾದ ಬ್ರೈಲ್ ಪುಸ್ತಕಗಳನ್ನು ಓದಿದರು. 
ರಾಜ್ಯ

ವಿಶೇಷಚೇತನರಿಗೆ ಹಲವಾರು ಯೋಜನೆಗಳಿದ್ದರೂ ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ: ಎನ್‌ಎಫ್‌ಬಿ ಪ್ರಧಾನ ಕಾರ್ಯದರ್ಶಿ

ಅಂಗವಿಕಲರಿಗಾಗಿ ಹಲವಾರು ಯೋಜನೆಗಳಿದ್ದರೂ, ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ ಎಂದು ರಾಷ್ಟ್ರೀಯ ಅಂಧರ ಒಕ್ಕೂಟದ (ಎನ್‌ಎಫ್‌ಬಿ) ಪ್ರಧಾನ ಕಾರ್ಯದರ್ಶಿ ಗೌತಮ್ ಅಗರವಾಲ್ ಅವರು ಬುಧವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಅಂಗವಿಕಲರಿಗಾಗಿ ಹಲವಾರು ಯೋಜನೆಗಳಿದ್ದರೂ, ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ ಎಂದು ರಾಷ್ಟ್ರೀಯ ಅಂಧರ ಒಕ್ಕೂಟದ (ಎನ್‌ಎಫ್‌ಬಿ) ಪ್ರಧಾನ ಕಾರ್ಯದರ್ಶಿ ಗೌತಮ್ ಅಗರವಾಲ್ ಅವರು ಬುಧವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಎಪಿಎಸ್ ಎಜುಕೇಶನ್ ಫೌಂಡೇಶನ್ ಬೆಂಗಳೂರಿನಲ್ಲಿ ಬುಧವಾರ ವಿಶ್ವ ಬ್ರೈಲ್ ದಿನಾಚರಣೆಯ ಆಯೋಜಿಸಿತ್ತು. ಲೂಯಿಸ್ ಬ್ರೈಲ್ (ಬ್ರೈಲ್ ಬರವಣಿಗೆ ವ್ಯವಸ್ಥೆಯನ್ನು ಕಂಡುಹಿಡಿದವರು) ಅವರ 214 ನೇ ಜನ್ಮ ವಾರ್ಷಿಕೋತ್ಸವವನ್ನು ಈ ದಿನ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಗೌತಮ್ ಅವರು, ಬ್ರೈಲ್ ವಿನ್ಯಾಸದ ಪುಸ್ತಕಗಳಲ್ಲಿನ ಕೊರತೆ, ಅಂಗವಿಕಲರಿಗೆ ಸಮಾನ ಉದ್ಯೋಗಾವಕಾಶಗಳ ಕೊರತೆ ಹೆಚ್ಚಾಗಿದ್ದು, ಇದು ಅವರ ಬೆಳವಣಿಗೆಗೆ ಅಡ್ಡಿಯಾಗಿದೆ. ಹೀಗಾಗಿ ಸರ್ಕಾರ ಘೋಷಿಸಿರುವ ಎಲ್ಲ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕಾಲಮಿತಿ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಛಲ ಮತ್ತು ಧ್ಯೇಯವಿದ್ದರೆ ವ್ಯಕ್ತಿಯು ಜೀವನದಲ್ಲಿ ಸಾಕಷ್ಟು ಸಾಧನೆ ಮಾಡಬಹುದು ಎಂದು ತಿಳಿಸಿದರು.

ಪುದುಚೇರಿಯಲ್ಲಿ ಡೆಪ್ಯುಟಿ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ದೃಷ್ಟಿಹೀನ ವಿಶೇಷಚೇರನ ಐಎಎಸ್ ಅಧಿಕಾರಿ ಸತೇಂದರ್ ಸಿಂಗ್ ಅವರು ಮಾತನಾಡಿ, ವಿಕಲಚೇತನರ ಸಮಸ್ಯೆಗಳು ಸಮಾಜದಲ್ಲಿ ಚರ್ಚೆಯಾಗುವಂತೆ ನೋಡಿಕೊಳ್ಳುವುದು ಮುಖ್ಯ ಎಂದರು. ಸಮಾರಂಭದಲ್ಲಿ 15 ವಿಶೇಷಚೇತನರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT