ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪೊಲೀಸರ ಕಸ್ಟಡಿಯಲ್ಲಿದ್ದ 23 ವರ್ಷದ ಆರೋಪಿ ಲಾಕಪ್ ಡೆತ್; ಪ್ರಕರಣ ಸಿಐಡಿ ತನಿಖೆಗೆ!

ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ಆರೋಪಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿದ್ದು,ಇದೊಂದು ಲಾಕಪ್‌ ಡೆತ್‌ ಕುಟುಂಬಿಕರು ಆರೋಪಿಸಿದ್ದಾರೆ.

ಬೆಂಗಳೂರು:  ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ಆರೋಪಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿದ್ದು,ಇದೊಂದು ಲಾಕಪ್‌ ಡೆತ್‌ ಕುಟುಂಬಿಕರು ಆರೋಪಿಸಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿದ್ದ ವಿನೋದ್ ಕಾಟನ್‌ ಪೇಟೆಯ ನಿವಾಸಿಯೇ ಆಗಿದ್ದು, ಪ್ರಕರಣವೊಂದರ ಸಂಬಂಧ ಬುಧವಾರ ಆತನನ್ನು ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಗುರುವಾರ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕಾಗಿತ್ತು. ಆದರೆ, ಗುರುವಾರ ಬೆಳಗ್ಗೆ 3.45ಕ್ಕೆ ಠಾಣೆ ಎಸ್‌ಎಚ್‌ಒ ಆರೋಪಿ ವಿನೋದ್‌ನನ್ನು ಗಮನಿಸಿದಾಗ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿದೆ.

ಕಾಟನ್​​ಪೇಟೆ  ಪೊಲೀಸರು ಜಾಮೀನು ರಹಿತ ವಾರೆಂಟ್ ಹಿನ್ನೆಲೆ ಆರೋಪಿ ವಿನೋದ್​ನನ್ನು ಕರೆತಂದಿದ್ದರು, ನಿನ್ನೆ ಸಂಜೆ ಠಾಣೆಗೆ ಕರೆತಂದಿದ್ದರು. ವಿನೋದ್​ ಮುಂಜಾನೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದನು. ಮುಂಜಾನೆ 3 ಗಂಟೆ ಸುಮಾರಿಗೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಪರಿಶೀಲನೆ ನಡೆಸಿದ್ದ ವೈದ್ಯರು ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ.

ಪೊಲೀಸರು ಕಸ್ಟೋಡಿಯಲ್ ಡೆತ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ಧಾರೆ. ಪ್ರಕರಣ ಸಂಬಂಧ ಕಮಿಷನರ್​​​ ಡಿಸಿಪಿ ಲಕ್ಷ್ಮಣ್​ ನಿಂಬರಗಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಪ್ರಕಾರ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಲಾಗುವುದು, ಪ್ರಕರಣವನ್ನು ಕರ್ನಾಟಕ ರಾಜ್ಯ ಪೊಲೀಸ್‌ನ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

2017ರ ಏಪ್ರಿಲ್ 21ರಂದು ವಿನೋದ್ ವಿರುದ್ಧ ಕಾಟನ್‌ಪೇಟೆ ಪೊಲೀಸರು ಡಕಾಯಿತಿಗೆ ಯತ್ನಿಸಿದ ಪ್ರಕರಣ ದಾಖಲಿಸಿದ್ದರು. ಮೈಸೂರು ರಸ್ತೆಯ ಪಶುವೈದ್ಯಕೀಯ ಆಸ್ಪತ್ರೆಯ ಕಾಂಪೌಂಡ್ ಬಳಿ ದಾರಿಹೋಕರನ್ನು ದರೋಡೆ ಮಾಡಲು ಯೋಜಿಸುತ್ತಿದ್ದಾಗ  ನಾಲ್ವರನ್ನು ಬಂಧಿಸಿದ್ದರು ಎಂದು ವರದಿಯಾಗಿದೆ. ವಿನೋದ್ ವಿರುದ್ಧ ನ್ಯಾಯಾಲಯವು ಮೂರು ಎನ್‌ಬಿಡಬ್ಲ್ಯೂಗಳನ್ನು ಹೊರಡಿಸಿದ ನಂತರ ಪೊಲೀಸರು ವಿನೋದ್‌ಗಾಗಿ ಹುಡುಕುತ್ತಿದ್ದರು.

ವಿನೊದ್‌ನನ್ನು ಠಾಣೆಗೆ ಕರೆತರುವಾಗ ಮದ್ಯದ ಅಮಲಿನಲ್ಲಿದ್ದ. ಸಂಜೆ 7 ಗಂಟೆ ಸುಮಾರಿಗೆ ಅವರನ್ನು ಸೆಲ್‌ಗೆ ಹಾಕಲಾಯಿತು. ಕಾರ್ಯವಿಧಾನದ ಪ್ರಕಾರ, ಎಸ್‌ಎಚ್‌ಒ ಪ್ರತಿ ಎರಡು ಗಂಟೆಗಳಿಗೊಮ್ಮೆ ಆರೋಪಿಯನ್ನು ಸೆಲ್‌ಗಳಲ್ಲಿ ಪರಿಶೀಲಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT