ಉಡುಪಿಯ ಹೊಟೇಲ್‌ನಿಂದ ಮಣಿಪಾಲಕ್ಕೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಶವವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸುತ್ತಿರುವುದು. 
ರಾಜ್ಯ

ಗುತ್ತಿಗೆದಾರ ಸಂತೋಷ್ ಪಾಟೀಲ್ ಮೊಬೈಲ್ ಡೇಟಾ ಸಲ್ಲಿಸಿ: ನ್ಯಾಯಾಲಯ

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹೊಸ ಬೆಳವಣಿಗೆಯೊಂದರಲ್ಲಿ ಮೃತ ಗುತ್ತಿಗೆದಾರ ಮತ್ತು ಇತರರ ಮೊಬೈಲ್ ಫೋನ್‌ಗಳಿಂದ ಪಡೆದ ಡೇಟಾವನ್ನು ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ವಿಶೇಷ ನ್ಯಾಯಾಲಯ ಗುರುವಾರ ನಿರ್ದೇಶನ ನೀಡಿದೆ.

ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹೊಸ ಬೆಳವಣಿಗೆಯೊಂದರಲ್ಲಿ ಮೃತ ಗುತ್ತಿಗೆದಾರ ಮತ್ತು ಇತರರ ಮೊಬೈಲ್ ಫೋನ್‌ಗಳಿಂದ ಪಡೆದ ಡೇಟಾವನ್ನು ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ವಿಶೇಷ ನ್ಯಾಯಾಲಯ ಗುರುವಾರ ನಿರ್ದೇಶನ ನೀಡಿದೆ.

ಉಡುಪಿ ಪೊಲೀಸರು ಜುಲೈನಲ್ಲಿ 'ಬಿ' ರಿಪೋರ್ಟ್ (ಕ್ಲೋಸರ್ ರಿಪೋರ್ಟ್) ಸಲ್ಲಿಸಿ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಿದ್ದರು. ಈ ವರದಿಯನ್ನು ಪ್ರಶ್ನಿಸಿ ಪಾಟೀಲ್ ಕುಟುಂಬ ಕೋರ್ಟ್ ಮೆಟ್ಟಿಲೇರಿದ್ದರು.

ದೂರುದಾರರ ಪರ ವಾದ ಮಂಡಿಸಿದ ವಕೀಲ ಎಚ್.ಕೆ.ಪವನ್ ಅವರು, ಸಂತೋಷ್ ಪಾಟೀಲ್ ಅವರ ಎರಡು ಮೊಬೈಲ್ ಫೋನ್, ವಿಕಾಸ್ ಅವರ ಎರಡು ಫೋನ್ ಮತ್ತು ಶ್ರೀಕಾಂತ್ ಗಿಡ್ಡಬಸಣ್ಣನವರ್ ಅವರ ಒಂದು ಫೋನ್ ಅನ್ನು ತನಿಖೆಯ ಭಾಗವಾಗಿ ವಶಪಡಿಸಿಕೊಳ್ಳಲಾಗಿದ್ದು, ಎಫ್ಎಸ್ಎಲ್ಗೆ ಕಳುಹಿಸಲಾಗಿದೆ.

“ಜೂನ್‌ನಲ್ಲಿ, ಎಫ್‌ಎಸ್‌ಎಲ್ ಈ ಫೋನ್‌ಗಳಿಂದ ಡೇಟಾವನ್ನು ಹೊರತೆಗೆಯಿತು ಮತ್ತು ಅದನ್ನು ಹಾರ್ಡ್ ಡಿಸ್ಕ್‌ಗಳಲ್ಲಿ ಹಾಕಿದೆ. ಆದರೆ, ಅಂತಿಮ ವರದಿ ('ಬಿ' ವರದಿ) ಸಲ್ಲಿಸುವಾಗ, ಹಾರ್ಡ್ ಡಿಸ್ಕ್ ನಲ್ಲಿ ಹಾಕಲಾಗಿರುವ ಡೇಟಾವನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಸತ್ಯವನ್ನು ಬಹಿರಂಗವಾಗಲು ಈ ಮಾಹಿತಿಗಳು ಅತ್ಯಗತ್ಯವಾಗಿದೆ. ಎಫ್‌ಎಸ್‌ಎಲ್ ಒದಗಿಸಿದ ದತ್ತಾಂಶವನ್ನು ನ್ಯಾಯಾಲಯದ ಗಮನಕ್ಕೆ ತರದಿದ್ದರೆ, ಸತ್ಯವನ್ನು ಬಹಿರಂಗವಾಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಈ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಧೀಶರು, ಹಾರ್ಡ್ ಡಿಸ್ಕ್‌ಗಳನ್ನು ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಿದರು ಮತ್ತು ವಿಚಾರಣೆಯನ್ನು ಜನವರಿ 30 ಕ್ಕೆ ಮುಂದೂಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ