ಲಾಂಛನ ಮತ್ತು ಮ್ಯಾಸ್ಕಟ್ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಸಚಿವ ಡಾ.ಕೆ. ಸಿ, ನಾರಾಯಣಗೌಡ, ತಾರಾ ಅನುರಾಧ ಮತ್ತಿತರರು 
ರಾಜ್ಯ

ಹುಬ್ಬಳ್ಳಿ-ಧಾರವಾಡದಲ್ಲಿ ಇದೇ 12 ರಿಂದ ರಾಷ್ಟ್ರೀಯ ಯುವ ಜನೋತ್ಸವ: ಲಾಂಛನ, ಮ್ಯಾಸ್ಕಟ್ ಬಿಡುಗಡೆ

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಇದೇ 12 ರಿಂದ ಐದು ದಿನ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ. 

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಇದೇ 12 ರಿಂದ ಐದು ದಿನ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ. 

ಯುವ ಜನೋತ್ಸವದ ಲಾಂಛನ ಮತ್ತು ಮ್ಯಾಸ್ಕಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆಗೊಳಿಸಿದರು. ಯುವ ವ್ಯವಹಾರಗಳ ಸಚಿವ ಡಾ. ಕೆ. ಸಿ, ನಾರಾಯಣಗೌಡ, ನಟಿ ತಾರಾ ಅನುರಾಧ ಮತ್ತಿತರರು ಉಪಸ್ಥಿತರಿದ್ದರು. ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವರ್ಚುಯಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು. 

ಲಾಂಛನ: ಒಡಿಶಾದ ಬನ್ಸಿಲಾಲ್ ಕೇತ್ಕಿ ರಚಿಸಿದ ಲಾಂಛನವನ್ನು ಉತ್ಸವಕ್ಕೆ ಆಯ್ಕೆ ಮಾಡಲಾಗಿದ್ದು, ಅವರಿಗೆ 50,000 ರೂ. ಬಹುಮಾನ ದೊರೆಯಲಿದೆ. ಈ ಲಾಂಛನ ಭಾರತದ ರಾಷ್ಟ್ರೀಯ ಹೂ ತಾವರೆಯಿಂದ ಪ್ರೇರೇಪಿತವಾಗಿದ್ದು, ರಾಷ್ಟ್ರೀಯತೆ, ನಿಸ್ವಾರ್ಥ ಸೇವೆ ಮತ್ತು ವೈವಿಧ್ಯತೆ ನಡುವೆಯೂ ಏಕತೆ ಹಾಗೂ ಸಹಕಾರವನ್ನು ಪ್ರತಿನಿಧಿಸುತ್ತದೆ. 

ಚಂಪಿ ಚಿಕ್ಕ ಮ್ಯಾಸ್ಕಟ್:  ಬೆಂಗಳೂರಿನ ಇನ್ಬಂ ರಚಿಸಿದ ಚಂಪಿ ಚಿಕ್ಕ ಮ್ಯಾಸ್ಕಟ್ ಆಯ್ಕೆಯಾಗಿದ್ದು, ಅವರಿಗೂ ರೂ. 50,000 ಬಹುಮಾನ ದೊರೆಯಲಿದೆ. ಇದು ಆನೆಯ ವಿನ್ಯಾಸ ಹೊಂದಿದ್ದು, ಕರ್ನಾಟಕದಲ್ಲಿ ಅತಿ ಹೆಚ್ಚಿರಿವು ಆನೆಗಳ ಸಂಖ್ಯೆಯನ್ನು ಪ್ರತಿನಿಧಿಸುತ್ತದೆ.

ಜಾಗತಿಕ ಮಟ್ಟದಲ್ಲಿ ಹವಾಮಾನ ಬದಲಾವಣೆ. ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ, ವಿಶ್ವ ಶಾಂತಿ ಜೊತೆಗೆ ಕ್ರೀಡೆ, ಸ್ಟಾರ್ಟ್ ಅಪ್, ನಾವಿನ್ಯತೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಯುವ ಮತ್ತು ಆಧುನಿಕ ಭಾರತವನ್ನು ಬಿಂಬಿಸುತ್ತದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT