ಲಾಂಛನ ಮತ್ತು ಮ್ಯಾಸ್ಕಟ್ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಸಚಿವ ಡಾ.ಕೆ. ಸಿ, ನಾರಾಯಣಗೌಡ, ತಾರಾ ಅನುರಾಧ ಮತ್ತಿತರರು 
ರಾಜ್ಯ

ಹುಬ್ಬಳ್ಳಿ-ಧಾರವಾಡದಲ್ಲಿ ಇದೇ 12 ರಿಂದ ರಾಷ್ಟ್ರೀಯ ಯುವ ಜನೋತ್ಸವ: ಲಾಂಛನ, ಮ್ಯಾಸ್ಕಟ್ ಬಿಡುಗಡೆ

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಇದೇ 12 ರಿಂದ ಐದು ದಿನ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ. 

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಇದೇ 12 ರಿಂದ ಐದು ದಿನ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ. 

ಯುವ ಜನೋತ್ಸವದ ಲಾಂಛನ ಮತ್ತು ಮ್ಯಾಸ್ಕಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆಗೊಳಿಸಿದರು. ಯುವ ವ್ಯವಹಾರಗಳ ಸಚಿವ ಡಾ. ಕೆ. ಸಿ, ನಾರಾಯಣಗೌಡ, ನಟಿ ತಾರಾ ಅನುರಾಧ ಮತ್ತಿತರರು ಉಪಸ್ಥಿತರಿದ್ದರು. ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವರ್ಚುಯಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು. 

ಲಾಂಛನ: ಒಡಿಶಾದ ಬನ್ಸಿಲಾಲ್ ಕೇತ್ಕಿ ರಚಿಸಿದ ಲಾಂಛನವನ್ನು ಉತ್ಸವಕ್ಕೆ ಆಯ್ಕೆ ಮಾಡಲಾಗಿದ್ದು, ಅವರಿಗೆ 50,000 ರೂ. ಬಹುಮಾನ ದೊರೆಯಲಿದೆ. ಈ ಲಾಂಛನ ಭಾರತದ ರಾಷ್ಟ್ರೀಯ ಹೂ ತಾವರೆಯಿಂದ ಪ್ರೇರೇಪಿತವಾಗಿದ್ದು, ರಾಷ್ಟ್ರೀಯತೆ, ನಿಸ್ವಾರ್ಥ ಸೇವೆ ಮತ್ತು ವೈವಿಧ್ಯತೆ ನಡುವೆಯೂ ಏಕತೆ ಹಾಗೂ ಸಹಕಾರವನ್ನು ಪ್ರತಿನಿಧಿಸುತ್ತದೆ. 

ಚಂಪಿ ಚಿಕ್ಕ ಮ್ಯಾಸ್ಕಟ್:  ಬೆಂಗಳೂರಿನ ಇನ್ಬಂ ರಚಿಸಿದ ಚಂಪಿ ಚಿಕ್ಕ ಮ್ಯಾಸ್ಕಟ್ ಆಯ್ಕೆಯಾಗಿದ್ದು, ಅವರಿಗೂ ರೂ. 50,000 ಬಹುಮಾನ ದೊರೆಯಲಿದೆ. ಇದು ಆನೆಯ ವಿನ್ಯಾಸ ಹೊಂದಿದ್ದು, ಕರ್ನಾಟಕದಲ್ಲಿ ಅತಿ ಹೆಚ್ಚಿರಿವು ಆನೆಗಳ ಸಂಖ್ಯೆಯನ್ನು ಪ್ರತಿನಿಧಿಸುತ್ತದೆ.

ಜಾಗತಿಕ ಮಟ್ಟದಲ್ಲಿ ಹವಾಮಾನ ಬದಲಾವಣೆ. ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ, ವಿಶ್ವ ಶಾಂತಿ ಜೊತೆಗೆ ಕ್ರೀಡೆ, ಸ್ಟಾರ್ಟ್ ಅಪ್, ನಾವಿನ್ಯತೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಯುವ ಮತ್ತು ಆಧುನಿಕ ಭಾರತವನ್ನು ಬಿಂಬಿಸುತ್ತದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT