ರೊಟ್ಟಿಗಳ ರಾಶಿ. 
ರಾಜ್ಯ

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ 22 ಲಕ್ಷ ಜೋಳದ ರೊಟ್ಟಿ

ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಭಾನುವಾರದಿಂದ ಆರಂಭವಾಗಿದ್ದು, ಜಾತ್ರೆಯಲ್ಲಿ ಪಾಲ್ಗೊಳ್ಳಲು ಭಕ್ತರ ಸಾಗರವೇ ಹರಿದು ಬರುತ್ತಿದೆ.

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಭಾನುವಾರದಿಂದ ಆರಂಭವಾಗಿದ್ದು, ಜಾತ್ರೆಯಲ್ಲಿ ಪಾಲ್ಗೊಳ್ಳಲು ಭಕ್ತರ ಸಾಗರವೇ ಹರಿದು ಬರುತ್ತಿದೆ.

ಮುಂದಿನ 15 ದಿನಗಳಲ್ಲಿ ಜಿಲ್ಲೆಗೆ 10-12 ಲಕ್ಷ ಭಕ್ತರು ಭೇಟಿ ನೀಡುವ ನಿರೀಕ್ಷೆಗಳಿದ್ದು, ದಾಸೋಹದ ಅಡುಗೆಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗಾಗಲೇ 22 ಲಕ್ಷ ಜೋಳದ ರೊಟ್ಟಿಗಳು ಸಿದ್ಧಗೊಂಡಿವೆ ಎಂದು ತಿಳಿದುಬಂದಿದೆ.

ಶತಮಾನಗಳಿಂದಲೂ, ಮಠಗಳ ಸುತ್ತಲಿನ ಗ್ರಾಮಸ್ಥರು ಜಾತ್ರೆಗೂ ಮುಂಚೆಯೇ ಜೋಳದ ಹಿಟ್ಟಿನಿಂದ ರೊಟ್ಟಿಗಳನ್ನು ತಯಾರಿಸಲು ಪ್ರಾರಂಭಿಸುತ್ತಾರೆ. ಈಗಾಗಲೇ ಜೋಳದ ರೊಟ್ಟಿಗಳಿದ್ದ ಟ್ರಕ್ ಗಳು ಮಠದ ಆವರಣಕ್ಕೆ ಬಂದಿದ್ದು, ರೊಟ್ಟಿಗಳ ಸಂಗ್ರಹಿಸಲು ಮಠದ ಬಳಿ ದೊಡ್ಡ ಪಂಡಾಲ್ ನ್ನು ಹಾಕಲಾಗಿದೆ. ಭದ್ರತೆ ಗಾಗಿ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸ್ವಚ್ಛತೆಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳಉ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಹಲವು ವರ್ಷಗಳಿಂದಲೂ ಮಠಧೀಶಕರು ಬಡವರಿಗೆ ಊಟ ಹಾಗೂ ಶಿಕ್ಷಣ ನೀಡುವ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಭಕ್ತರ ಭಾಗವಹಿಸುವಿಕೆ ಮಠದ ಜಾತ್ಯತೀತ ದೃಷ್ಟಿಕೋನಕ್ಕೆ ಕಾರಣವಾಗಿದೆ. ಯೋಗ ಗುರು ಬಾಬಾ ರಾಮ್‌ದೇವ್ ಇಲ್ಲಿಗೆ ಬಂದಾಗ ಬೃಹತ್ ಸಮಾವೇಶವನ್ನು ನೋಡಿ ಅದನ್ನು ದಕ್ಷಿಣದ ಕುಂಭ ಎಂದು ಕರೆದಿದ್ದರು ಎಂದು ಕೊಪ್ಪಳದ ಗವಿಸಿದ್ದೇಶ್ವರ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರುಣ್ ಕುಮಾರ್ ಸ್ಮರಿಸಿದರು.

ಜೋಳದ ರೊಟ್ಟಿಗಳಷ್ಟೇ ಅಲ್ಲದೆ, ಅನೇಕ ಮನೆಗಳು ಮತ್ತು ಸಂಸ್ಥೆಗಳು ‘ಮಾಲೆಡಿ’ ಅಥವಾ ‘ಮಾಡ್ಲಿ’ ಎಂಬ ಸಿಹಿ ಖಾದ್ಯವನ್ನು ದೊಡ್ಡ ಪ್ರಮಾಣದಲ್ಲಿ ತಯಾರಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿಜೆ ಎಂದು ಕುಮಾರ್ ಅವರು ಹೇಳಿದ್ದಾರೆ.

“ಸ್ನೇಹಿತರ ಗುಂಪು ಮತ್ತು ಕೆಲವು ಕುಟುಂಬಗಳು ಮುಂದಿನ ಎರಡು ವಾರಗಳಲ್ಲಿ 2.5 ಟನ್ ತೂಕದ ಖಾದ್ಯವನ್ನು ದಾನ ಮಾಡುವುದಾಗಿ ಭರವಸೆ ನೀಡಿವೆ. ವಾರ್ಷಿಕ ರಥೋತ್ಸವದ ಒಂದು ದಿನ ಮುಂಚಿತವಾಗಿ ಮಠದ ಅಡುಗೆಮನೆಯಲ್ಲಿ ಸುಮಾರು 275 ಕ್ವಿಂಟಾಲ್ ಅಕ್ಕಿಯನ್ನು ಸಿದ್ಧವಿರಿಸಲಾಗಿದೆ. ಒಂದು ರೀತಿಯಲ್ಲಿ ಇದು ಜನರ ಜಾತ್ರೆಯಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT