ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ ಕಾನೂನು ಪ್ರಾಧಿಕಾರ ಸ್ಥಾಪಿಸಿ: ರಾಜ್ಯ ಸರ್ಕಾರಕ್ಕೆ ಕಾನೂನು ತಜ್ಞರ ಆಗ್ರಹ

ಉನ್ನತ ನ್ಯಾಯಾಂಗದ ಮಹತ್ವದ ತೀರ್ಪುಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಕನ್ನಡದಲ್ಲಿ ಕಾನೂನು ಪುಸ್ತಕಗಳ ಬರವಣಿಗೆ ಮತ್ತು ಪ್ರಕಟಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಬೇಕು ಎಂದು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಹಾವೇರಿ: ಉನ್ನತ ನ್ಯಾಯಾಂಗದ ಮಹತ್ವದ ತೀರ್ಪುಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಕನ್ನಡದಲ್ಲಿ ಕಾನೂನು ಪುಸ್ತಕಗಳ ಬರವಣಿಗೆ ಮತ್ತು ಪ್ರಕಟಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಬೇಕು ಎಂದು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಶನಿವಾರ ಇಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಕನ್ನಡದಲ್ಲಿ ಕಾನೂನು ಸಾಹಿತ್ಯ’ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿ ಕಾನೂನು ತಜ್ಞರು, ಮಾತೃಭಾಷೆಯಲ್ಲಿ ಪುಸ್ತಕಗಳು ಲಭ್ಯವಿಲ್ಲದ ಕಾರಣ ಸಾಮಾನ್ಯ ಜನರಿಗೆ ಕಾನೂನಿನ ಪ್ರಮುಖ ಅಂಶಗಳ ಬಗ್ಗೆ ತಿಳಿಯದಂತಾಗಿದೆ. ನ್ಯಾಯಾಲಯದ ಕಾರ್ಯವೈಖರಿಯನ್ನು ಬಹುಪಾಲು ಇಂಗ್ಲಿಷ್‌ನಲ್ಲಿ ಮಾಡಲಾಗುತ್ತಿರುವ ಕಾರಣ ಕೆಲವರಿಗಷ್ಟೇ ಕಾನೂನಿನ ತೀರ್ಪಿನ ಬಗ್ಗೆ ತಿಳಿಯುವಂತಾಗುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಸಿ ಬಸವರಾಜು ಅವರು ಮಾತನಾಡಿ, ಪ್ರಮುಖ ನ್ಯಾಯಾಲಯದ ತೀರ್ಪುಗಳ ಬಗ್ಗೆ ಸಾಮಾನ್ಯ ಜನರಿಗೆ ಹೇಗೆ ಅಲ್ಪ ಜ್ಞಾನವಿದೆ ಎಂಬುದರ ಕುರಿತು ಬೆಳಕು ಚೆಲ್ಲಿದರು.

ನ್ಯಾಯಾಲಯದ ತೀರ್ಪುಗಳು ಹಲವು ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಸಾಂವಿಧಾನಿಕ ಪರಿಣಾಮಗಳನ್ನು ಹೊಂದಿದ್ದು, ಅದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ನ್ಯಾಯಮೂರ್ತಿ ಅರಳಿ ನಾಗರಾಜ್ ಮಾತನಾಡಿ, ಸರ್ಕಾರ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಲಿ ಅಥವಾ ಇಲ್ಲದಿರಲಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಕನ್ನಡ ಭಾಷೆಯಲ್ಲಿ ಕಾನೂನು ಸಾಹಿತ್ಯವನ್ನು ಹೊರತರಲು ಮುಂದಾಗಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT