ಸಿಎಂ ಬೊಮ್ಮಾಯಿ 
ರಾಜ್ಯ

ಮಹದಾಯಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಸಿಎಂ ಬೊಮ್ಮಾಯಿ

ಮಹದಾಯಿ ಯೋಜನೆ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಹುಬ್ಬಳ್ಳಿ: ಮಹದಾಯಿ ಯೋಜನೆ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಮಹದಾಯಿ ವಿಚಾರದಲ್ಲಿ ಉದ್ದೇಶಿತ ಕಾಂಗ್ರೆಸ್ ಸಮಾವೇಶದ ಕುರಿತು ಸುದ್ದಿಕಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ನನ್ನ "ರಕ್ತದಲ್ಲಿ ಬರೆದ ಪತ್ರ" ದಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ. ನಾನು ಜಲಸಂಪನ್ಮೂಲ ಸಚಿವನಾಗಿದ್ದ ಅವಧಿಯಲ್ಲಿ 5.5 ಕಿ.ಮೀ ಉದ್ದದ ಕಾಲುವೆ ನಿರ್ಮಿಸಲಾಗಿದೆ ಎಂದು ಹೇಳಿದರು.

ಬಳಿಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಏನು ಮಾಡಿದೆ? ಒಂದು ಹನಿ ನೀರನ್ನು ಬೇರೆಯವರಿಗೆ ಹರಿಸುವುದಿಲ್ಲ ಎಂದು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಗೋವಾದಲ್ಲಿ ಚುನಾವಣಾ ಪ್ರಚಾರದ ವೇಳೆ ಘೋಷಿಸಿದ್ದರು.

ಬಿಜೆಪಿ ಆಡಳಿತಾವಧಿಯಲ್ಲಿ ನಿರ್ಮಿಸಿದ ರಾಜಕಾಲುವೆಗೆ ಕಾಂಗ್ರೆಸ್ ಸರ್ಕಾರ ಗೋಡೆ ನಿರ್ಮಿಸಿದೆ. ಕರ್ನಾಟಕಕ್ಕೆ ಮಹದಾಯಿ ನೀರು ತರುವಲ್ಲಿ ಕಾಂಗ್ರೆಸ್ ಹೇಗೆ ಎಡವಿತು ಎಂಬುದನ್ನು ಇದು ತೋರಿಸುತ್ತದೆ ಎಂದು ತಿಳಿಸಿದರು.

ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಬಗ್ಗೆ ಮಾತನಾಡಿ, ರಾಜ್ಯಗಳ ಮರುಸಂಘಟನೆಯ ಮೊದಲು ಸಾಕಷ್ಟು ವರದಿಗಳು ಬಂದಿವೆ. ನಂತರವೇ ಕಾಯಿದೆ ಅಂತಿಮಗೊಳಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT