ಆರಗ ಜ್ಞಾನೇಂದ್ರ ಮತ್ತು ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ರಾಜಕೀಯವಾಗಿ ಕುಮಾರಸ್ವಾಮಿ ಹತಾಶ ಸ್ಥಿತಿ ತಲುಪಿದ್ದಾರೆ: ಸ್ಯಾಂಟ್ರೊ ರವಿ ವಿಚಾರಕ್ಕೆ ಹೆಚ್‌ ಡಿಕೆ- ಆರಗ ಜ್ಞಾನೇಂದ್ರ ಜಟಾಪಟಿ

ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ ಎಂಬ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ ಎಂಬ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

ಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದಾರೆಂಬುದು ಸುಳ್ಳು. ಎಚ್.ಡಿ ಕುಮಾರಸ್ವಾಮಿ ಹಸಿ ಸುಳ್ಳು ಹೇಳುವುದರ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ. ಕುಮಾರಸ್ವಾಮಿ ನನ್ನ ಮೇಲೆ ಮಾಡಿದ ಆರೋಪ ಸಾಬೀತುಪಡಿಸಬೇಕು ಎಂದು  ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿಯವರು, ಅತ್ಯಂತ ಬೇಜವಾಬ್ದಾರಿಯಿಂದ ಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳನ್ನು ಹೇಳುವುದರ ಮೂಲಕ ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ವೇದ್ಯವಾಗುತ್ತದೆ. ಕುಮಾರಸ್ವಾಮಿಯವರು ನನ್ನ ಮೇಲೆ ಮಾಡಿದ ಆಪಾದನೆಯನ್ನು ಸಾಬೀತು ಪಡಿಸಬೇಕು.

ಸಾಂಟ್ರೋ ರವಿಯ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಿ ವಿಚಾರಣೆ ಮಾಡಿ ಎಂದು ಪೊಲೀಸರಿಗೆ ತಿಳಿಸಿದ್ದೇನೆ. ನನ್ನ ಮನೆಯಲ್ಲಿ ಆತ ಹಣದ ಗಂಟನ್ನು ಬಿಚ್ಚಿದ್ದಾನೆ ಎಂದು ಕುಮಾರಸ್ವಾಮಿ ಸತ್ಯಕ್ಕೆ ಅಪಚಾರವಾಗುವಂತಹ ಆಪಾದನೆ ಮಾಡಿದ್ದಾರೆ. ನನ್ನನ್ನು ಯಾವ ಕಾರಣದಿಂದ ತೇಜೋವಧೆ ಮಾಡುತ್ತಿದ್ದಾರೆ, ಎಂದು ತಿಳಿದಿಲ್ಲ. ಇದರಿಂದ ಅವರಿಗೆ ಯಾವ ರೀತಿ ಲಾಭವಾಗುತ್ತದೆ ಗೊತ್ತಿಲ್ಲ. ಗೃಹ ಸಚಿವನಾದ ನನ್ನನ್ನು ಸಮಾಜದ ಕಟ್ಟಕಡೆಯ ಜನರೂ ಒಳಗೊಂಡಂತೆ ದಿನನಿತ್ಯ ನೂರಾರು ಮಂದಿ ಭೇಟಿ ಮಾಡುತ್ತಾರೆ. ಪ್ರತಿಯೊಬ್ಬರ ಹಿನ್ನೆಲೆಯನ್ನೂ ಸೋಸಿ ನೋಡಲಾಗುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಹೇಳಿದ್ದಾರೆ.

ಸ್ಯಾಂಟ್ರೋ ರವಿ ಜೊತೆಗೆ ಸಚಿವರು, ಬಿಜೆಪಿ  ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳ ವೈರಲ್ ಆಗುತ್ತಿವೆ. ಅದರಲ್ಲೂ ಮುಖ್ಯವಾಗಿ ಕಂತೆ-ಕಂತೆ ನೋಟುಗಳ ಜೊತೆ ಸ್ಯಾಂಟ್ರೋ ರವಿ ಫೋಟೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಆರಗ ಮನೆಯಲ್ಲಿ ಹಣದ ಲೆಕ್ಕ ಹಾಕುತ್ತಿರುವ ಫೋಟೋ ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಹೇಳಿದ್ದರು.

ಬೀದರ್​ ಜಿಲ್ಲೆ ಬಸವಕಲ್ಯಾಣದಲ್ಲಿ ಮಾತನಾಡಿದ ಹೆಚ್​.ಡಿ.ಕುಮಾರಸ್ವಾಮಿ, ಗೃಹ ಸಚಿವರ ಮನೆಯಲ್ಲಿ ಹಣದ ಲೆಕ್ಕ ಹಾಕಿರುವ ಫೋಟೋ ವೈರಲ್ ಆಗಿದೆ. ಆರಗ ಮನೆಯಲ್ಲಿ ಲೆಕ್ಕ ಹಾಕಿದ ಹಣದ ಫೋಟೋ ತೆಗೆದವರು ಯಾರು? ಎಸಿಪಿ ವರ್ಗಾವಣೆ ಮಾಡಿಸಲು 15 ಲಕ್ಷ ಹಣ ಎಣಿಸುತ್ತಿರುವುದಂತೆ. ಇದು ಗೃಹಸಚಿವರ ನಿವಾಸದಲ್ಲೇ ನಡೆದಿದೆ, ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT