ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಜನವರಿ 12ಕ್ಕೆ ಹುಬ್ಬಳ್ಳಿಗೆ ಪ್ರಧಾನಿ ಮೋದಿ ಆಗಮನ, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗಿ- ಸಿಎಂ ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿ, ಇದೇ ತಿಂಗಳ  12 ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಇದೇ ತಿಂಗಳ  12 ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಅಂದು ಪ್ರಧಾನಿ ಮೋದಿಯವರು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ  ಹಿಂದಿರುಗಲಿದ್ದಾರೆ.  ಏಳು ದಿನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳು ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು. 

ಜನವರಿ 19ಕ್ಕೆ ನಾರಾಯಣಪುರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಕ್ಷೇತ್ರ ಪುನರ್ ವಿಂಗಡಣೆ-ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಕುರಿತು ಚರ್ಚೆಗೆ 15 ಗಂಟೆ ನಿಗದಿ; ನಾಳೆ ಸಂಜೆ 4 ಗಂಟೆಗೆ ಮತದಾನ..!

ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ, ವಿಪಕ್ಷಗಳ ಬಹಿಷ್ಕಾರ: ಮೂರು ಕಾರಣ ಕೊಟ್ಟ ಜೈರಾಮ್ ರಮೇಶ್!

ಕ್ಷೇತ್ರ ಪುನರ್ವಿಂಗಡಣೆ ಕುರಿತು ವದಂತಿಗಳ ಹರಡದಿರಿ: ವಿಪಕ್ಷಗಳಿಗೆ ಕಿರಣ್ ರಿಜಿಜು ಮನವಿ

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!

SCROLL FOR NEXT