ಮೃತ ತೇಜಸ್ವಿನಿ ಹಾಗೂ ಮಗು. 
ರಾಜ್ಯ

ಸಂಚಾರ ದಟ್ಟಣೆ​ಗೆ ನನ್ನ ಸೊಸೆ, ಮೊಮ್ಮಗನ ಸಾವೇ ಕಾರಣ ಎಂಬ ಸಣ್ಣ ಸುಳಿವೂ ಇರಲಿಲ್ಲ: ಮೃತ ತೇಜಸ್ವಿನಿ ಮಾವ

ಎಚ್​ಬಿಆರ್​ ಲೇಔಟ್​ನಲ್ಲಿ ಆಗಿರುವ ಸಂಚಾರ ದಟ್ಟಣೆಗೆ ನನ್ನ ಕುಟುಂಬದವರು ಮೃತಪಟ್ಟಿದ್ದೇ ಕಾರಣ ಎಂಬ ಸಣ್ಣ ಸುಳಿವೂ ನನಗಿರಲಿಲ್ಲ ಎಂದು ಮೆಟ್ರೋ ಪಿಲ್ಲರ್ ದುರಂತ ಪ್ರಕರಣದಲ್ಲಿ ಮೃತಪಟ್ಟ ತೇಜಸ್ವಿನಿ ಅವರ ಮಾವ ವಿಜಯ್​ಕುಮಾರ್ ಕಣ್ಣೀರು ಹಾಕಿದ್ದಾರೆ.​

ಬೆಂಗಳೂರು: ಎಚ್​ಬಿಆರ್​ ಲೇಔಟ್​ನಲ್ಲಿ ಆಗಿರುವ ಸಂಚಾರ ದಟ್ಟಣೆಗೆ ನನ್ನ ಕುಟುಂಬದವರು ಮೃತಪಟ್ಟಿದ್ದೇ ಕಾರಣ ಎಂಬ ಸಣ್ಣ ಸುಳಿವೂ ನನಗಿರಲಿಲ್ಲ ಎಂದು ಮೆಟ್ರೋ ಪಿಲ್ಲರ್ ದುರಂತ ಪ್ರಕರಣದಲ್ಲಿ ಮೃತಪಟ್ಟ ತೇಜಸ್ವಿನಿ ಅವರ ಮಾವ ವಿಜಯ್​ಕುಮಾರ್ ಕಣ್ಣೀರು ಹಾಕಿದ್ದಾರೆ.​

ಎಚ್‌ಬಿಆರ್ ಲೇಔಟ್‌ನ ಹೊರ ವರ್ತುಲ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಬಿದ್ದ ಪರಿಣಾಮ ವಿಜಯ್ ಕುಮಾರ್ ಅವರು ತಮ್ಮ ಸೊಸೆ ಮತ್ತು 2.6 ವರ್ಷದ ಮೊಮ್ಮಗನನ್ನು ಕಳೆದುಕೊಂಡಿದ್ದಾರೆ.

ಮೆಟ್ರೋ ಪಿಲ್ಲರ್ ಕುಸಿದಿದೆ ಎಂಬುದು ನನಗೆ ತಿಳಿದಿರಲಿಲ್ಲ. ಆಗಾಗ ಇಲ್ಲಿ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಳ್ಳುವುದು ಸಹಜ ಎಂದು ನಾನು ಭಾವಿಸಿದೆ, ಆದರೆ ಆ ಪಿಲ್ಲರ್ ನನ್ನ ಮೊಮ್ಮಗ ಹಾಗೂ ಸೊಸೆಯನ್ನು ಬಲಿತೆಗೆದುಕೊಂಡಿದೆ ಎಂಬುದು ತಿಳಿದಿರಲಿಲ್ಲ.

ನಾನು ತೀವ್ರ ದುಃಖದಲ್ಲಿದ್ದೇನೆ, ಇದು ನನಗೆ ಭರಿಸಲಾರದ ನಷ್ಟ. ಮೆಟ್ರೋ ರೈಲು ಕಾಮಗಾರಿ ನಡೆಯುತ್ತಿರುವಾಗ ಪಿಲ್ಲರ್​ನ ಹತ್ತಿರದ ಕನಿಷ್ಠ 30 ಮೀಟರ್​ಗಳವರೆಗೆ ಹೋಗಲು ಯಾರಿಗೂ ಅವಕಾಶ ನೀಡಬಾರದು, ಆದರೆ ವಾಹನಗಳು 5-10 ಅಡಿಗಳ ಒಳಗೆ ಚಲಿಸುತ್ತವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ನಮ್ಮ ಕುಟುಂಬದ ಜೀವಗಳು ಹೋಗಿವೆ. ನಮ್ಮ ಕುಟುಂಬ ಅನುಭವಿಸಿದ ನೋವು ಇನ್ನಾವುದೇ ಕುಟುಂಬಕ್ಕೂ ಎದುರಾಗಬಾರದು, ಸರ್ಕಾರ ಕೂಡಲೇ ಬಿಎಂಆರ್'ಸಿಎಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಸುರಕ್ಷತಾ ಕ್ರಮ ತೆಗೆದುಕೊಳ್ಳದೆ ಮೆಟ್ರೋ ಕಾಮಗಾರಿ ನಡೆಸಿದ್ದರಿಂದಲೇ ಈ ದುರಂತ ಸಂಭವಿಸಿದೆ. ಬೇರೆಯವರ ನಿರ್ಲಕ್ಷ್ಯಕ್ಕೆ ನಮ್ಮ ಕುಟುಂಬದ ಸದಸ್ಯರು ಬಲಿಯಾಗಿದ್ದಾರೆ. ನಮ್ಮ ಸೊಸೆ ಹಾಗೂ ಮೊಮ್ಮಗನ ಸಾವಿಗೆ ಬಿಎಂಆರ್'ಸಿಎಸ್ ನಿರ್ಲಕ್ಷ್ಯವೇ ಕಾರಣ. ಈಗ ನಮಗೆ ಸರ್ಕಾರ ರೂ.20 ಲಕ್ಷ ಪರಿಹಾರ ಕೊಟ್ಟರೆ ಹೋದ ಜೀವಗಳು ಮತ್ತೆ ಸಿಗುತ್ತವೆಯೇ? ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ವಿಸ್ಮಿತಾಳಂತೆಯೇ ವಿಹಾನ್ ನನ್ನನ್ನು ಬಹಳ ಹಚ್ಚಿಕೊಂಡಿದ್ದ. ನಮ್ಮನ್ನು ನೋವನ್ನು ಯಾರಿಗೆ ಹೇಳುವುದು ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!