ವಿಧಾನಸೌಧದ ಮುಂಭಾಗದಲ್ಲಿ ಮೆಕ್ಯಾನಿಕಲ್ ಸ್ವೀಪರ್‌ಗಳು ನಿಂತಿರುವುದು. 
ರಾಜ್ಯ

ಬೆಂಗಳೂರು: ಪ್ರಮುಖ ರಸ್ತೆಗಳಲ್ಲಿ 'ಮೆಕ್ಯಾನಿಕಲ್ ಸ್ವೀಪರ್‌' ಬಳಕೆಗೆ ಬಿಬಿಎಂಪಿ ಮುಂದು!

ನಗರದ ಏರ್‌ಪೋರ್ಟ್‌ ರಸ್ತೆ ಹಾಗೂ ಇತರೆ ಅಧಿಕ ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಮೆಕ್ಯಾನಿಕಲ್ ಸ್ವೀಪರ್‌'ಗಳ ಬಳಕೆ ಮಾಡಲು ಬಿಬಿಎಂಪಿ ಮುಂದಾಗಿದೆ.

ಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆ ಹಾಗೂ ಇತರೆ ಅಧಿಕ ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಮೆಕ್ಯಾನಿಕಲ್ ಸ್ವೀಪರ್‌'ಗಳ ಬಳಕೆ ಮಾಡಲು ಬಿಬಿಎಂಪಿ ಮುಂದಾಗಿದೆ.

ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರಲಿದ್ದು, ಇಂತರ ರಸ್ತೆಗಳಲ್ಲಿ ಅಪಘಾತ ಸಂಖ್ಯೆ ಕೂಡ ಹೆಚ್ಚಾಗಿರುತ್ತವೆ. ಈ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರ ರಕ್ಷಣೆ ಮಾಡಲು ಮುಂದಾಗಿರುವ ಬಿಬಿಎಂಪಿ, ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಮೆಕ್ಯಾನಿಕಲ್ ಸ್ವೀಪರ್‌ಗಳನ್ನು ನಿಯೋಜಿಸಲು ಮುಂದಾಗಿದೆ.

ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ವಿಭಾಗದ ಮುಖ್ಯ ಎಂಜಿನಿಯರ್ ಬಸವರಾಜ ಕಬಾಡೆ ಮಾತನಾಡಿ, ಸುಲಭವಾಗಿ ನಿಯಂತ್ರಿಸಬಲ್ಲ ಯಂತ್ರಗಳು ಇದಾಗಿದ್ದು, ಇದರ ತೂಕ 30 ಕೆಜಿ ಇರಲಿದೆ. ಯಂತ್ರದ ಕೆಳಭಾಗದಲ್ಲಿ ಟ್ರಾಲಿ ಮಾದರಿ ಚಕ್ರಗಳನ್ನು ಅಳವಡಿಸಲಾಗಿರುತ್ತದೆ. ಹೀಗಾಗಿ ಯಂತ್ರವನ್ನು ಸ್ಟಾರ್ಟ್‌ ಮಾಡಿದ ಕೂಡಲೇ ತನ್ನಿಂದ ತಾನೇ ರಸ್ತೆಯಲ್ಲಿ ಸಾಗಲಿದೆ. ಅದರಿಂದ ಪೌರಕಾರ್ಮಿಕರು ಯಂತ್ರವನ್ನು ವಾರ್ಡ್‌ ಕಚೇರಿಗೆ ತರುವುದು ಮತ್ತು ತೆಗೆದುಕೊಂಡು ಹೋಗುವುದು ಸುಲಭವಾಗಲಿದೆ. ಯಂತ್ರಗಳ ಬಳಕೆಗೆ ಪೌರಕಾರ್ಮಿಕರಿಗೆ ತರಬೇತಿಯನ್ನೂ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಪೌರಕಾರ್ಮಿಕರು ಈ ಕಸಗುಡಿಸುವ ಯಂತ್ರವನ್ನು ಬಳಸಬಹುದು, ಕೆಲಸ ಪ್ರಾರಂಭಿಸಲು ಕೇವಲ ಒಂದು ಬಟನ್ ಒತ್ತುವ ಅಗತ್ಯವಿರುತ್ತದೆ. ಈಗಾಗಲೇ ಕೆಲವೆಡೆ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ, ಈ ಬಗ್ಗೆ ಪೌರಕಾರ್ಮಿಕರು ತಮ್ಮ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ. ಪಾಲಿಕೆಯು ಆರಂಭದಲ್ಲಿ 815 'ಮ್ಯಾನುಯಲ್ ಪುಶ್ ಆಪರೇಟಿವ್ ಸ್ವೀಪಿಂಗ್ ಮೆಷಿನ್'ಗಳನ್ನು ಖರೀದಿಸಲಿದ್ದು, ಇದಕ್ಕೆ 3.30 ಕೋಟಿ ರೂ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.

“ಬೆಂಗಳೂರಿನ 13,000 ಕಿಮೀ ಉದ್ದದ ರಸ್ತೆಯಲ್ಲಿ, 1,400 ಕಿಮೀ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಿವೆ, ಉಳಿದವು ವಾರ್ಡ್'ಗೆ ಸೇರಿದ ರಸ್ತೆಗಳಾಗಿವೆ. ಭಾರೀ ದಟ್ಟಣೆ ಮತ್ತು ವೇಗದ ವಾಹನಗಳಿಂದ ಇಂತಹ ರಸ್ತೆಗಳಲ್ಲಿ ಕಸ ಗುಡಿಸುವುದು ಸವಾಲಿನ ಕೆಲಸವಾಗಿರುತ್ತದೆ. ಹೀಗಾಗಿ ಈ ರಸ್ತೆಗಳಲ್ಲಿ ಯಂತ್ರಗಳನ್ನು ನಿಯೋಜಿಸಲಾಗುತ್ತಿದೆ. ಪಾಲಿಕೆ ಈಗಾಗಲೇ ಟೆಂಡರ್ ಕರೆದಿದ್ದು, ನಾಲ್ಕು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT