ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ 30 ಲಕ್ಷ ಬೂಸ್ಟರ್‌ ಡೋಸ್‌ ಮನವಿಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆಯಿಲ್ಲ: ಅಧಿಕಾರಿಗಳು

ಕೋವಿಡ್ -19 ಲಸಿಕೆ ಡೋಸ್‌ಗಳ ವಿತರಣೆಯ ಪ್ರಮಾಣ ಮತ್ತು ಸಮಯದ ಕುರಿತು ಕೇಂದ್ರ ಸರ್ಕಾರದ ಪ್ರತಿಕ್ರಿಯೆಗಾಗಿ ಕರ್ನಾಟಕ ಆರೋಗ್ಯ ಇಲಾಖೆ ಕಾದು ಕುಳಿತಿದೆ.

ಬೆಂಗಳೂರು: ಕೋವಿಡ್ -19 ಲಸಿಕೆ ಡೋಸ್‌ಗಳ ವಿತರಣೆಯ ಪ್ರಮಾಣ ಮತ್ತು ಸಮಯದ ಕುರಿತು ಕೇಂದ್ರ ಸರ್ಕಾರದ ಪ್ರತಿಕ್ರಿಯೆಗಾಗಿ ಕರ್ನಾಟಕ ಆರೋಗ್ಯ ಇಲಾಖೆ ಕಾದು ಕುಳಿತಿದೆ.

ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಸಿಕೆಗೆ ಇದೀಗ ಬೇಡಿಕೆಗಳು ಹೆಚ್ಚಾಗತೊಡಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು 30 ಲಕ್ಷ ಬೂಸ್ಟರ್‌ ಡೋಸ್‌ ಲಸಿಕೆಗೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿತ್ತು. ಆದರೆ, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಇನ್ನೂ ಯಾವುದೇ ಪ್ರತಿಕ್ರಿಯೆಗಳು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಕ್ಕೆ ಎಷ್ಟು ಲಸಿಕೆಗಳನ್ನು ತಲುಪಿಸಲಾಗುವುದು ಮತ್ತು ಯಾವ ಸಮಯದಲ್ಲಿ ಲಸಿಕೆಗಳು ರಾಜ್ಯಕ್ಕೆ ರವಾನಿಸಲಾಗುವುದು ಎಂಬುದರ ಬಗ್ಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆಗಳೂ ಬಂದಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆಯ ಉಪ ನಿರ್ದೇಶಕಿ (ರೋಗನಿರೋಧಕ) ಡಾ ರಜನಿ ಅವರು ಹೇಳಿದ್ದಾರೆ.

ಚೀನಾ, ಯುಎಸ್‌ಎ, ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳ ಉಲ್ಬಣದೊಂದಿಗೆ, ಡಿಸೆಂಬರ್‌ನಲ್ಲಿ ಮತ್ತೊಂದು ನಿರೀಕ್ಷಿತ ಅಲೆಯ ವಿರುದ್ಧ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವವು ಹಲವು ಕ್ರಮಗಳ ಕೈಗೊಳ್ಳುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT