ಸ್ಮಶಾನ ಕಾರ್ಮಿಕರೊಂದಿಗೆ ಸಿಎಂ ಮತ್ತು ಸಚಿವರುಗಳ ಉಪಾಹಾರ ಸೇವನೆ 
ರಾಜ್ಯ

ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರ ಸೇವೆ ಖಾಯಂ, ಇನ್ನು 100 ಕಾರ್ಮಿಕರ ಸೇವೆ ಖಾಯಂಗೆ ಆದೇಶ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರನ್ನು ಸೇವೆಯಲ್ಲಿ ಖಾಯಂ ಮಾಡಲಾಗಿದೆ. ಉಳಿದ 100 ಜನರಿಗೆ ಖಾಯಂ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಬೆಂಗಳೂರು ನಗರದ ಸ್ಮಶಾನ ಕಾರ್ಮಿಕರ ಜತೆ ಇಂದು ಬೆಳಗ್ಗೆ ಅವರು ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಉಪಾಹಾರ ಸೇವಿಸಿದ ನಂತರ ಈ ವಿಷಯ ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರನ್ನು ಸೇವೆಯಲ್ಲಿ ಖಾಯಂ ಮಾಡಲಾಗಿದೆ. ಉಳಿದ 100 ಜನರಿಗೆ ಖಾಯಂ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಬೆಂಗಳೂರು ನಗರದ ಸ್ಮಶಾನ ಕಾರ್ಮಿಕರ ಜತೆ ಇಂದು ಬೆಳಗ್ಗೆ ಅವರು ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಉಪಾಹಾರ ಸೇವಿಸಿದ ನಂತರ ಈ ವಿಷಯ ತಿಳಿಸಿದ್ದಾರೆ.

ಇಷ್ಟು ವರ್ಷ ಸ್ಮಶಾನ ಕಾರ್ಮಿಕರ ಕಷ್ಟಗಳನ್ನು ಯಾವ ಸರ್ಕಾರಗಳೂ ಆಲಿಸಿರಲಿಲ್ಲ. ಅವರ ನೋವಿಗೆ ಸ್ಪಂದಿಸಿರಲಿಲ್ಲ, ಬಿಜೆಪಿ ಸರ್ಕಾರ ಬಡವರು, ತುಳಿತಕ್ಕೊಳಗಾದವರ ಪರವಾಗಿರುತ್ತದೆ. ಸ್ಮಶಾನ ಕಾರ್ಮಿಕರನ್ನು ಹರಿಶ್ಚಂದ್ರ ಗೆಳೆಯರ ಬಳಗ ಎಂದು ಇನ್ನು ಮುಂದೆ ಕರೆಯಬೇಕು ಎಂದು ಅಲ್ಲಿಯೇ ಇದ್ದ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.

ಬಳಿಕ ಸ್ಮಶಾನ ಕಾರ್ಮಿಕರು ಸತ್ಯ ಹರಿಶ್ಚಂದ್ರ ಪ್ರತಿಮೆಯನ್ನು ನೀಡಿ ಮುಖ್ಯಮಂತ್ರಿಗಳಿಗೆ ಸನ್ಮಾನ ಮಾಡಿದರು. ಕಾರ್ಮಿಕರು ಕೊಟ್ಟಿರುವ ಸತ್ಯಹರಿಶ್ಚಂದ್ರ ಪ್ರತಿಮೆಯನ್ನು ನಾನು ದೇವರ ಮನೆಯಲ್ಲಿ ಇಡುತ್ತೇನೆ ಎಂದು ಮುಖ್ಯಮಂತ್ರಿಗಳು ಹೇಳಿದರು. 

ಮುಖ್ಯಮಂತ್ರಿಗಳ ಜೊತೆ ಗೃಹ ಸಚಿವ ಆರಗ ಜ್ಞಾನೇಂದ್ರ, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಲ ತಿಂಗಳ ಹಿಂದೆ ಸಿಎಂ ಬೊಮ್ಮಾಯಿ ಪೌರ ಕಾರ್ಮಿಕರ ಜೊತೆ ಉಪಾಹಾರ ಸೇವಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel-Iran war: Dohaದಲ್ಲಿ ಸಿಲುಕಿದ Indian basketball team, ತಂಡದಲ್ಲಿದ್ದಾರೆ ಮೂವರು ಕನ್ನಡಿಗರು..!

'ನಾನೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೊತ್ತು, ಖಂಡಿತಾ ನಮ್ಮಿಬ್ಬರದ್ದು ಹಾಲು-ಜೇನಿನ ಸಂಬಂಧ': D K ಶಿವಕುಮಾರ್

ವಾಯುಮಾರ್ಗ ಬಂದ್ ಎಫೆಕ್ಟ್: ದುಬೈಗೆ ಹೊರಟ Emirates ವಿಮಾನ KIAಗೆ ವಾಪಸ್

SCROLL FOR NEXT