ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ ಸಮಸ್ಯೆ 
ರಾಜ್ಯ

ಪಿಲ್ಲರ್ ದುರಂತದ ಬಳಿಕ ಈಗ ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ ಸಮಸ್ಯೆ; ಬೈಕ್ ಸವಾರನಿಗೆ ಗಾಯ

ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ಇತ್ತೀಚೆಗೆ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವನ್ನಪ್ಪಿದ್ದ ಘಟನೆ ಬೆನ್ನಲ್ಲೇ ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ (ರಸ್ತೆ ಕುಳಿ) ಸಮಸ್ಯೆ ಎದುರಾಗಿದೆ. 

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ಇತ್ತೀಚೆಗೆ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವನ್ನಪ್ಪಿದ್ದ ಘಟನೆ ಬೆನ್ನಲ್ಲೇ ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ (ರಸ್ತೆ ಕುಳಿ) ಸಮಸ್ಯೆ ಎದುರಾಗಿದೆ. 

ಮೆಟ್ರೋ ಹತ್ತಿರವೇ ಇರುವ ಬ್ರಿಗೇಡ್ ರಸ್ತೆಯಲ್ಲಿ ಏಕಾ ಏಕಿ ಸಿಂಕ್ ಹೋಲ್ ಸಮಸ್ಯೆ ಕಾಣಿಸಿಕೊಂಡಿದ್ದು, ಓರ್ವ ದ್ವಿಚಕ್ರ ವಾಹನ ಸವಾರ ಸಿಂಕ್ ಹೋಲ್ ಒಳಗೆ ಬಿದ್ದು ಗಾಯಗೊಂಡಿದ್ದಾರೆ.

 
ಈ ಘಟನೆ ಹೇಗೆ ನಡೆಯಿತು ಎಂಬುದರ ಬಗ್ಗೆ ಪೊಲೀಸರು ಇನ್ನಷ್ಟೇ ತನಿಖೆ ನಡೆಸಬೇಕಿದೆ. ಗಾಯಗೊಂಡ ವ್ಯಕ್ತಿಯನ್ನು ಫೋರ್ಟಿಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಇದನ್ನೂ ಓದಿ: ತ್ವರಿತಗತಿ ಕಾಮಗಾರಿಯಿಂದ ಅಪಘಾತ ಸಂಭವಿಸಿಲ್ಲ: ಬಿಎಂಆರ್‌ಸಿಎಲ್ ಸ್ಪಷ್ಟನೆ
 
ವರದಿಗಳ ಪ್ರಕಾರ, ಬೈಕರ್ ನ್ನು ಪುನೀತ್ ಎಂದು ಗುರುತಿಸಲಾಗಿದ್ದು, ಮಧ್ಯಾಹ್ನ 12:15 ರ ವೇಳೆಗೆ ಬ್ರಿಗೇಡ್ ಟವರ್ಸ್ ನ ಬಳಿ ಈ ಘಟನೆ ನಡೆದಿದೆ. ಘಟನೆ ನಡೆದ ಸ್ಥಳ ಬಿಬಿಎಂಪಿ ಕೇಂದ್ರ ಕಚೇರಿಗೆ ಒಂದು ಕಿ.ಮೀ ದೂರದಲ್ಲಿ ನಡೆದಿದೆ.

ರಸ್ತೆ ಕುಳಿಗೆ ಬಿದ್ದು ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಬಳಿಕ ಆತನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಅಶೋಕ್ ನಗರ ಪೊಲೀಸ್ ಠಾಣೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬೆನ್ನಲ್ಲೇ ಆ ಪ್ರದೇಶದಲ್ಲಿ ಸಂಚಾರ ದಟ್ಟಣೆ ಹೆಚ್ಚಾಯಿತು, ಆದರೆ ನಾವು ತಕ್ಷಣವೇ ಸಂಚಾರ ಮಾರ್ಗವನ್ನು ಬದಲಾಯಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT