ಮೆಟ್ರೋ ಪಿಲ್ಲರ್ ಕುಸಿದು ಬಿದ್ದಿರುವುದು. 
ರಾಜ್ಯ

ಸಂಚಾರ ಬಂದ್ ಮಾಡಿ, ಮೆಟ್ರೋ ನಿರ್ಮಾಣ ಕಾರ್ಯವನ್ನು ರಾತ್ರಿ ವೇಳೆ ಮಾಡಬೇಕು: ತಜ್ಞರು

ನಮ್ಮ ಮೆಟ್ರೊ ಕಾಮಗಾರಿಯಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸಿರುವ ತಜ್ಞರು ಮತ್ತು ಸಿವಿಲ್ ಎಂಜಿನಿಯರಿಂಗ್ ಸಲಹೆಗಾರರು ಸಂಚಾರ ಬಂದ್ ಮಾಡಿ, ಮೆಟ್ರೋ ನಿರ್ಮಾಣ ಕಾರ್ಯವನ್ನು ರಾತ್ರಿ ಸಮಯದಲ್ಲಿ ಮಾಡಬೇಕೆಂದು ಶಿಫಾರಸು ಮಾಡಿದ್ದಾರೆ.

ಬೆಂಗಳೂರು: ನಮ್ಮ ಮೆಟ್ರೊ ಕಾಮಗಾರಿಯಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸಿರುವ ತಜ್ಞರು ಮತ್ತು ಸಿವಿಲ್ ಎಂಜಿನಿಯರಿಂಗ್ ಸಲಹೆಗಾರರು ಸಂಚಾರ ಬಂದ್ ಮಾಡಿ, ಮೆಟ್ರೋ ನಿರ್ಮಾಣ ಕಾರ್ಯವನ್ನು ರಾತ್ರಿ ಸಮಯದಲ್ಲಿ ಮಾಡಬೇಕೆಂದು ಶಿಫಾರಸು ಮಾಡಿದ್ದಾರೆ.

ಎಚ್‌ಬಿಆರ್ ಲೇಔಟ್‌ನ ಹೊರ ವರ್ತುಲ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಬಿದ್ದು ತಾಯಿ ಮತ್ತು ಮಗ ಸಾವನ್ನಪ್ಪಿದ್ದರು, ಘಟನೆ ಬೆನ್ನಲ್ಲೇ ಸುರಕ್ಷತಾ ನಿಯಮಗಳ ರೂಪಿಸಿ, ಅವುಗಳನ್ನು ಪರಿಣಾಮಕಾರಿ ರೀತಿಯಲ್ಲಿ ಜಾರಿಗೊಳಿಸಬೇಕೆಂದು ತಜ್ಞರು ತಿಳಿಸಿದ್ದಾರೆ.

ಇಂತರ ಕ್ರಮಗಳು ಇತರೆ ದೇಶಗಳಲ್ಲಿ ಈಗಾಗಲೇ ಜಾರಿಯಲ್ಲಿವೆ. ಅವುಗಳನ್ನು ಪರಿಣಾಮಕಾರಿ ರೀತಿಯಲ್ಲಿ ಅನುಸರಿಸಲಾಗುತ್ತಿದೆ. ಆದರೆ, ನಮ್ಮಲ್ಲಿ ದೊಡ್ಡ ಮಟ್ಟದ ಯೋಜನೆಗೆ ಅಂತಹ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಇಂತಹ ದೊಡ್ಡ ದೊಡ್ಡ ಕಾಮಗಾರಿ ಕಾರ್ಯಗಳನ್ನು ರಾತ್ರಿ ಸಮಯದಲ್ಲಿ ಮಾಡಬೇಕು. ಕೆಲಸ ಮಾಡುವಾಗ ಸಂಚಾರಕ್ಕೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

“ಇಂತಹ ಎತ್ತರದ ಪಿಲ್ಲರ್ ಗಳನ್ನು ಹಾಕುವಾಗ, ಪೂರ್ವನಿರ್ಮಿತ ಕಾಲಮ್‌ಗಳನ್ನು ಸೈಟ್‌ಗೆ ತರಬೇಕು. ಹಾಗೂ ಸ್ಥಳದಲ್ಲಿ ಕಾಮಗಾರಿ ನಡೆಯುತ್ತಿದ್ದರೆ ಪಿಲ್ಲರ್‌ಗಳನ್ನು ನಿರ್ಮಿಸಲು ಕೆಲ ದಿನಗಳ ಗಡುವು ನೀಡಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು. ವರ್ಷಗಟ್ಟಲೆ ಕಾಮಗಾರಿ ನಡೆಸಲು ಬಿಡಬಾರದು. ತಾತ್ತ್ವಿಕವಾಗಿ, ನಿರ್ಮಾಣ ಕಾರ್ಯವನ್ನು ರಾತ್ರಿ ಸಮಯದಲ್ಲಿ ಕಾರ್ಯಗತಗೊಳಿಸಬೇಕು ಮತ್ತು ಆ ಸಮಯದಲ್ಲಿ ಸಂಚಾರಕ್ಕೆ ಅನುಮತಿ ನೀಡಬಾರದು. ಇದನ್ನು ದೆಹಲಿ ಮೆಟ್ರೋದಲ್ಲಿ, ಪಾಶ್ಚಿಮಾತ್ಯ ದೇಶಗಳಲ್ಲಿ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಅನುಸರಿಸುತ್ತಿದ್ದಾರೆಂದು ತಿಳಿಸಿದ್ದಾರೆ.

ಈ ನಡುವೆ ಸಿವಿಲ್ ಎಂಜಿನಿಯರಿಂಗ್ ಸಲಹೆಗಾರರೊಬ್ಬರು ಮಾತನಾಡಿ, ನಿರ್ಮಾಣ ಸಾಮಗ್ರಿಗಳು ಕುಸಿದಿರುವುದು ಇದೇ ಮೊದಲೇನಲ್ಲ ಎಂದಿದ್ದಾರೆ.

ಎಂಜಿ ರಸ್ತೆಯಿಂದ ಬೈಯಪನಹಳ್ಳಿ ಲೈನ್‌ನಲ್ಲಿ ಕಾಮಗಾರಿ ನಡೆಯುತ್ತಿದ್ದಾಗ ನಿಲುಗಡೆ ಮಾಡಲಾಗಿದ್ದ ಕಾರುಗಳು ಮತ್ತು ಫುಟ್‌ಪಾತ್‌ಗಳ ಮೇಲೆ ನಿರ್ಮಾಣ ಸಾಮಗ್ರಿಗಳು ಬಿದ್ದಿದ್ದವು, ಆದರೆ, ಅದೃಷ್ಟವಶಾತ್ ಜನರ ಮೇಲೆ ಬಿದ್ದಿರಲಿಲ್ಲ. "ಕಾಮಗಾರಿಗಳ ಕಾರ್ಯಗತಗೊಳಿಸುವಿಕೆಯಲ್ಲಿ ಮೆಟ್ರೋಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಅಧಿಕಾರಿಗಳು ಭದ್ರತಾ ಅಂಶಗಳಿಗೆ ಏಕೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ರಸ್ತೆಗಳು ತುಂಬಾ ಕಿರಿದಾಗಿರುವುದರಿಂದ ಸುರಕ್ಷತೆಯ ಅಂತರವನ್ನು ಹೆಚ್ಚಿಸಲು ಸಾಧ್ಯವಿಲ್ಲ ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

''12-18 ಮೀಟರ್‌ ಎತ್ತರದ ಪಿಲ್ಲರ್‌ ನಿರ್ಮಿಸುವಾಗ ಹೆಚ್ಚುವರಿಯಾಗಿ ನಾಲ್ಕು ಮೀಟರ್‌ ಅಂತರವಿದ್ದರೂ ಪ್ರಯೋಜನವಾಗುವುದಿಲ್ಲ. ರಾತ್ರಿ ವೇಳೆಯಲ್ಲಿ ಮಾತ್ರ ಕಾಮಗಾರಿಗಳನ್ನು ನಿರ್ವಹಿಸುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಯೋಜನಾ ಅವಧಿಯನ್ನು ಹೆಚ್ಚಿಸಿ, ಕಾಮಗಾರಿ ವೇಳೆ ಸಂಚಾರವನ್ನು ಬಂದ್ ಮಾಡಬೇಕೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT