ಸಿಎಂ ಬೊಮ್ಮಾಯಿ 
ರಾಜ್ಯ

ಫೆಬ್ರವರಿ 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌: ಸಿದ್ಧತೆ ಆರಂಭಿಸಿದ ಸಿಎಂ ಬೊಮ್ಮಾಯಿ

ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಬಜೆಟ್‌ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಭೇಟಿ ನೀಡಿದ ಮರುದಿನನೇ ಅಂದರೆ ಜನವರಿ 20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗಲೇ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಲು ಮುಂದಾಗಿದ್ದು, ಇದು ಪ್ರಸ್ತುತ ಸರ್ಕಾರ ಕೊನೆಯ ಬಜೆಟ್ ಆಗಿರಲಿದೆ. ಹೀಗಾಗಿ ಮತದಾರರನ್ನು ಓಲೈಸಲು ಮುಖ್ಯಮಂತ್ರಿಗಳು ಹಲವು ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.

ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ನೀರಾವರಿ ಯೋಜನೆಗಳತ್ತ ಹೆಚ್ಚಿನ ಗಮನ ಹರಿಸಲಿದ್ದಾರೆ, ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಯೋಜನೆಗಳನ್ನು ಅವರು ಘೋಷಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ,  2023-24ರ ಬಜೆಟ್‌ನ ಪ್ರಾಥಮಿಕ ಸುತ್ತಿನ ಸಭೆಗಳು ಈಗಾಗಲೇ ಮುಗಿದಿವೆ. ಫೆಬ್ರವರಿ 20 ರ ನಂತರ, ಮುಖ್ಯಮಂತ್ರಿ ಅವರು ಬೆಂಗಳೂರಿನಲ್ಲಿದ್ದಾಗಲೆಲ್ಲಾ ಪ್ರತಿದಿನ ಸಭೆಗಳನ್ನು ನಡೆಸುತ್ತಾರೆಂದು ಹೇಳಿದ್ದಾರೆ.

ಕೋವಿಡ್ ನಂತರದ, ಅಬಕಾರಿ ಇಲಾಖೆ ಸೇರಿದಂತೆ ತೆರಿಗೆ ಸಂಗ್ರಹಣೆಗಳು ಗಮನಾರ್ಹವಾಗಿ ಹೆಚ್ಚಾದ ಕಾರಣ, ಬೊಮ್ಮಾಯಿ ಅವರು ಈ ಬಾರಿ ಅನೇಕ ಹೊಸ ಯೋಜನೆಗಳನ್ನು ಘೋಷಿಸಲಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ಗಾತ್ರವು ದೊಡ್ಡದಾಗಿರಲಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

SCROLL FOR NEXT