ಸ್ವಾಮಿ ವಿವೇಕಾನಂದರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಸಚಿವ ಗೋಪಾಲಯ್ಯ 
ರಾಜ್ಯ

ಗ್ರಾಮೀಣ ಪ್ರದೇಶದಲ್ಲಿ ವಿವೇಕಾನಂದರ ಯೋಜನೆ ಜಾರಿಗೆ ಕ್ರಮ: ಸಚಿವ ಗೋಪಾಲಯ್ಯ

ವಿವೇಕಾನಂದರ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಜಾರಿಗೊಳಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದು ಅಬಕಾರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ಬೆಂಗಳೂರು: ವಿವೇಕಾನಂದರ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಜಾರಿಗೊಳಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದು ಅಬಕಾರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಪ್ರತಿ ಪಂಚಾಯಿತಿಯಿಂದ ಎರಡು ಸಂಘದಂತೆ, 16,000 ಯುವ ಸಂಘಗಳಿಗೆ, ಸರ್ಕಾರದಿಂದ ರೂ. 1 ಲಕ್ಷ  ಹಾಗೂ ಬ್ಯಾಂಕ್ ಗಳಿಂದ ರೂ. 5 ಲಕ್ಷ ನೀಡಿ ವಿವೇಕಾನಂದ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದರು. 

ಸ್ವಾಮಿ ವಿವೇಕಾನಂದರ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಅನುಷ್ಠಾನಕ್ಕೆ ತರಬೇಕು ಎಂಬ ದೃಷ್ಟಿಯಿಂದ ಗ್ರಾಮೀಣ ಪ್ರದೇಶದ 18 ವರ್ಷ ದಿಂದ 30 ವರ್ಷ ಇರುವಂತಹ ಯುವಕರ ತಂಡಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಆ ಗ್ರಾಮಗಳನ್ನು ಮಾದರಿ ಗ್ರಾಮವಾಗಿ ಮಾಡಲಾಗುವುದು ಎಂದು ತಿಳಿಸಿದರು. 

ಮಕ್ಕಳಿಗೆ ಸ್ವಾಮಿ ವಿವೇಕಾನಂದರ ಚಿಂತನೆಗಳು ಹಾಗೂ ವಿಚಾರಧಾರೆಗಳನ್ನು ತಿಳಿಸುವಂತಹ ಕೆಲಸವನ್ನು ಮಾಡೋಣ. ಪ್ರತಿ ದಿನ ವಿವೇಕಾನಂದರ ಕುರಿತು ಪುಸ್ತಕಗಳನ್ನು ಓದಲು ಮಕ್ಕಳಿಗೆ ತಿಳಿಸಬೇಕು. ಅವರು ದೇಶಕ್ಕಾಗಿ ಕೊಟ್ಟಿರುವಂತಹ ಕೊಡುಗೆಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT