ರಾಜ್ಯದ ಸ್ತಬ್ಧ ಚಿತ್ರ 
ರಾಜ್ಯ

ಕೊನೆಗೂ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ

ದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಗಣರೋಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಕೊನೆಗೂ ಅವಕಾಶ ನೀಡಲಾಗಿದೆ.

ಬೆಂಗಳೂರು: ದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಗಣರೋಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಕೊನೆಗೂ ಅವಕಾಶ ನೀಡಲಾಗಿದೆ.

ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ಸಾಲುಮರದ ತಿಮ್ಮಕ್ಕ ಮತ್ತು ತುಳಸಿಗೌಡ ಹಾಲಕ್ಕಿ ಅವರ ಸಾಧನೆಗಳನ್ನು ಬಿಂಬಿಸುವ ಕರ್ನಾಟಕದ 'ನಾರಿ ಶಕ್ತಿ ವಿಷಯದ ಸ್ತಬ್ಧ ಚಿತ್ರವನ್ನು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರ ಕೈ ಬಿಟ್ಟಿತ್ತು. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ರಾಜ್ಯಾದ್ಯಂತ ತೀವ್ರ ಜನಾಕ್ರೋಶ ವ್ಯಕ್ತವಾಗಿತ್ತು.

ಈ ಸಂಬಂಧ ನಡೆದ ನಾಲ್ಕು ಸಭೆಗಳಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಸಂಬಂಧ ಒಪ್ಪಿಗೆ ಸೂಚಿಸಿದ ಕೇಂದ್ರ ಸರ್ಕಾರ, ಐದನೇ ಸಭೆಯಲ್ಲಿ ಕರ್ನಾಟಕವನ್ನು ಕೈಬಿಟ್ಟಿತ್ತು. ಇತರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಕರ್ನಾಟಕವನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿತ್ತು.

ಇದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ನಡುವೆ ಕೊನೆ ಕ್ಷಣ ಕ್ಷಣದಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT