ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಗಾಂಜಾ ಪ್ರಕರಣ ಸಂಬಂಧ ವೈದ್ಯ ವಿದ್ಯಾರ್ಥಿ ಸೇರಿ ಮತ್ತೆ ಮೂವರ ಬಂಧನ

ಗಾಂಜಾ ಮಾರಾಟ ಹಾಗೂ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ.

ಮಂಗಳೂರು: ಗಾಂಜಾ ಮಾರಾಟ ಹಾಗೂ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ.

ನಗರದ ವೈದ್ಯಕೀಯ ಕಾಲೇಜೊಂದರಲ್ಲಿ ಎಂಡಿ ಓದುತ್ತಿರುವ ತುಮಕೂರಿನ ಡಾ.ಹರ್ಷ ಕುಮಾರ್‌, ಡಿ ಫಾರ್ಮಾ ವಿದ್ಯಾರ್ಥಿಯಾಗಿರುವ ಕೇರಳದ ಕೊಚ್ಚಿಯ ಅಡಾನ್‌ ದೇವ್‌, ಮಂಗಳೂರು ಕಸಬ ಬೆಂಗ್ರೆಯ ಮಹಮ್ಮದ್‌ ಅಫ್ರಾರ್‌ ಬಂಧಿತರು.

ಮಹಮ್ಮದ್ ಅಫ್ರಾರ್‌ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬುಧವಾರ 10 ಮಂದಿಯನ್ನು ಬಂಧಿಸಲಾಗಿತ್ತು, ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 13ಕ್ಕೇರಿದೆ.

ಇಂಗ್ಲೆಂಡ್‌ ನಿವಾಸಿಯಾಗಿದ್ದ ಆತ ಅನಿವಾಸಿ ಭಾರತೀಯ ಕೋಟಾ ಅಡಿ 15 ವರ್ಷಗಳಿಂದ ನಗರದಲ್ಲಿ ವಾಸವಾಗಿರುವುದು ಹಾಗೂ ನಗರದ ಪ್ರತಿಷ್ಠಿತ ದಂತ ವೈದ್ಯ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಬಿಡಿಎಸ್‌ ವಿದ್ಯಾರ್ಥಿಯಾಗಿರುವುದು ಕಂಡು ಬಂದಿತ್ತು. ಆತ ನೀಡಿದ ಮಾಹಿತಿ ಆಧಾರದ ಮೇಲೆ ಇಬ್ಬರು ವೈದ್ಯರು, ಏಳು ಜನ ವೈದ್ಯಕೀಯ ವಿದ್ಯಾರ್ಥಿಗಳ ಸಹಿತ ಪೊಲೀಸರು 10 ಜನರನ್ನು ಬಂಧಿಸಿದ್ದರು. ಈಗ ಮತ್ತೆ ಮೂವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT