ಸಂಗ್ರಹ ಚಿತ್ರ 
ರಾಜ್ಯ

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ: 5-6 ದಿನಗಳಲ್ಲಿ ಐಐಎಸ್‌ಸಿಯಿಂದ ವರದಿ ಸಲ್ಲಿಕೆ

ನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗೂರಿನ ಐಐಎಸ್‌ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗೂರಿನ ಐಐಎಸ್‌ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.

ತನಿಖೆ ನಡೆಯುತ್ತಿರುವ ಭಾರತೀಯ ಭಾರತೀಯ ವಿಜ್ಞಾನ ಸಂಸ್ಥೆಯ ಉನ್ನತ ವಿಜ್ಞಾನಿಯೊಬ್ಬರು ಮಾತನಾಡಿ, ಬಹಳ ದಿನಗಳಿಂದ ಪಿಲ್ಲರ್ ನಿಲ್ಲಿಸಿದ್ದರಿಂದ ಇದು ದುರಂತಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.

ಈ ನಡುವೆ ಐಐಎಸ್‌ಸಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ.ಜೆ.ಎಂ.ಚಂದ್ರ ಕಿಶನ್ ಅವರು ಬುಧವಾರ ಸಂಜೆ ಅಪಘಾತ ಸಂಭವಿಸಿದ ಎಚ್‌ಬಿಆರ್ ಲೇಔಟ್‌ನ ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿ ಪರಿಶೀಲನೆ ನಡೆಸಿದರು.

ಭೇಟಿಯ ನಂತರ ಮಾಧ್ಯಮ ಮಾತನಾಡಿದ ಕಿಶನ್ ಅವರು,  ಪ್ರಾಥಮಿಕ ತನಿಖೆಯಲ್ಲಿ ದುರಂತಕ್ಕೆ ಕೆಲ ತಪ್ಪುಗಳೇ ಕಾರಣ ಎಂಬುದು ತಿಳಿದುಬಂದಿದೆ. ಕಾಮಗಾರಿಗೆ ಬಳಸಿದ ಕಟ್ಟಡ ಸಾಮಾಗ್ರಿಗಳ ಬಗ್ಗೆ ವರದಿ ಕೇಳಲಾಗಿದೆ. ಕಬ್ಬಿಣ ತೂಕ ಜಾಸ್ತಿ ಆಗಿ ನಿರ್ಮಾಣ ಹಂತದ ಪಿಲ್ಲರ್ ಬಿದ್ದಿದೆ. ಪಿಲ್ಲರ್‌ಗೆ ಸಪೋರ್ಟಿಂಗ್ ಕೊಡಬೇಕಿತ್ತು. ಬಹಳ ಸಮಯದ ಕಾಲ ಅದನ್ನು ನಿಲ್ಲಿಸಲಾಗಿದೆ. ಯಾವುದೇ ಸಂದರ್ಭದಲ್ಲಿ ಬಹು ಎತ್ತರ ಪಿಲ್ಲರ್ ಗಳನ್ನು ಬಹಳ ಸಮಯದ ಕಾಲ ನಿಲ್ಲಿಸಬಾರದು. ನಿಲ್ಲಿಸಿದ್ದೇ ಆದರೆ, ಅದ ತಾನಾಗಿಯೇ ಕೆಳಗೆ ಬೀಳುತ್ತದೆ. ಘಟನೆಯಲ್ಲಿ ಕೆಳಗೆ ಬಿದ್ದ ಪಿಲ್ಲರ್ 18 ಮೀಟರ್ ಉದ್ದವುಳ್ಳದ್ದಾಗಿದೆ ಎಂದು ಹೇಳಿದ್ದಾರೆ.

ಬಿಎಂಆರ್'ಸಿಎಲ್ ಎಂಜಿನಿಯರ್‌ಗಳು ಅಮಾನತು
ಘಟನೆ ಸಂಬಂಧ ಕೆಆರ್ ಪುರಂ-ಕೆಐಎ ಲೈನ್‌ನ ಪ್ಯಾಕೇಜ್ ಒಂದರಲ್ಲಿ ನೇಮಕಗೊಂಡಿರುವ ಉಪ ಮುಖ್ಯ ಎಂಜಿನಿಯರ್ ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶ್ ಬೆಂಡೆಕರಿ ಮತ್ತು ಸೆಕ್ಷನ್ ಎಂಜಿನಿಯರ್ ಜಾಫರ್ ಸಾದಿಕ್ ಎಂಬ ಮೂವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಮಾಹಿತಿ ನೀಡಿರುವ ಬಿಎಂಆರ್‌ಸಿಎಲ್ ಎಂಡಿ ಅಂಜುಮ್ ಪರ್ವೇಜ್ ಅವರು, ಘಟನೆಯ ಕಾರಣಗಳನ್ನು ತನಿಖೆ ಮಾಡಲು ಬಿಎಂಆರ್‌ಸಿಎಲ್ ಆಂತರಿಕ ತಾಂತ್ರಿಕ ತಂಡವನ್ನು ರಚನೆ ಮಾಡಲಾಗಿದ್ದು, ಈಗಾಗಲೇ ಎಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೇ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ

ಬೆಂಗಳೂರಿನಲ್ಲಿ ಜಪಾನಿಗನ ಬಂಧನ: 19 ದಿನ ಜೈಲುವಾಸ, 7 ವರ್ಷಗಳ ಬಳಿಕ ಕರ್ನಾಟಕ ಸರ್ಕಾರದಿಂದ 75 ಸಾವಿರ ಪರಿಹಾರ!