ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ 
ರಾಜ್ಯ

ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದರು.

ಹುಬ್ಬಳ್ಳಿ: ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದರು.

ಇಂದು ಪ್ರಧಾನಿ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವವನ್ನು ರಿಮೋರ್ಟ್ ಒತ್ತುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,  ಇಂದು ಸ್ವಾಮಿ ವಿವೇಕಾನಂದರ ಜನ್ಮ ದಿನ. ವಿವೇಕಾನಂದರಿಂದ ಪ್ರೇರಣೆ ಪಡೆದು ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ದೇಶದಲ್ಲಿ ಶೇಕಡಾ 40ಕ್ಕೂ ಹೆಚ್ಚು ಯುವಕರು ಇರುವ ದೇಶ ನಮ್ಮದು. ಯುವ ಸಮೂಹಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆ ಜಾರಿ ಮಾಡಲಾಗಿದೆ ಎಂದು ಹೇಳಿದರು.

ಇಂದು ಮಧ್ಯಾಹ್ನ ವಾಯುಸೇನೆ ವಿಮಾನದಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು, ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನದವರೆಗೆ ಸುಮಾರು ಒಂದು ಗಂಟೆಗಳ ಕಾಲ ರೋಡ್ ಶೋ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT