ಪ್ರಹ್ಲಾದ್ ಜೋಶಿ 
ರಾಜ್ಯ

ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿಲ್ಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನನಮತಿರು ನರೇಂದ್ರ ಮೋದಿ ಅವರು ರೋಡ್ ಶೋ ನಡೆಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಹೇಳಿದ್ದಾರೆ.

ಧಾರವಾಡ: ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನನಮತಿರು ನರೇಂದ್ರ ಮೋದಿ ಅವರು ರೋಡ್ ಶೋ ನಡೆಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಹೇಳಿದ್ದಾರೆ.

ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಹಿನ್ನೆಲೆ ರೈಲ್ವೇ ಮೈದಾನಕ್ಕೆ ಭೇಟಿ ನೀಡಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿರುವ ಮೋದಿಯವರು, ಪ್ರತಿ ಕಿಲೋ ಮೀಟರ್‌ಗೆ ಒಂದು ಕಡೆ ಜನರನ್ನು ಭೇಟಿಯಾಗುತ್ತಾರೆ. ಒಟ್ಟು ಎಂಟು ಕಡೆ ಜನರನ್ನ ಮೋದಿ ಭೇಟಿಯಾಗುತ್ತಾರೆಂದು ಹೇಳಿದರು.

ರಾಷ್ಟ್ರೀಯ ಯುವಜನೋತ್ಸವಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಇದೊಂದು ಅಭೂತಪೂರ್ವ ಕಾರ್ಯಕ್ರಮವಾಗಿದೆ. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ದೊಡ್ಡ ಪ್ರಮಾಣದಲ್ಲಿ ನೋಂದಣಿಯಾಗಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಯಾರೇ ಬಂದರೂ ಒಳಗೆ ಬಿಡುವುದಕ್ಕೆ ಸೂಚಿಸಲಾಗಿದೆ. ಇನ್ನು ಜಿಮ್ ಖಾನಾ ಕ್ಲಬ್‌ನಲ್ಲಿ ಎಲ್‌ಇಡಿ ವ್ಯವಸ್ಥೆ ಮಾಡಲಾಗಿದೆ. ನ ಭೂತೋ ನ ಭವಿಷ್ಯತಿ ಅನ್ನೋ ರೀತಿಯಲ್ಲಿ ವ್ಯವಸ್ಥೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಲಕ್ಷಾಂತರ ಜ‌ನರು ಬರುತ್ತಿದ್ದಾರೆ. ಪ್ರಧಾನಿ ಮೋದಿ ಬರುತ್ತಿರುವುದು ಜ‌ನತೆಯ ಸಂತೋಷಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಯಾವುದೇ ರೀತಿ ರೋಡ್ ಶೋ ನಡೆಸುತ್ತಿಲ್ಲ. ದಾರಿಯಲ್ಲಿ ಜನರನ್ನ ಭೇಟಿಯಾಗುತ್ತಾರಷ್ಟೆ. ಇದು ಅಖಿಲ ಭಾರತ ಮಟ್ಟದ ಕಾರ್ಯಕ್ರಮವಾಗಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಎಲ್ಲಾ ನಾಯಕರ ಹೆಸರು ಹಾಕಲಾಗಿತ್ತು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರು ಕೈಬಿಡಲಾಗಿತ್ತು ಎಂಬುದು ನನ್ನ ಗಮನಕ್ಕೆ ಬಂದ ಕೂಡಲೇ ಅದನ್ನು ಸರಿಮಾಡುವ ಕೆಲಸ ಮಾಡಲಾಯಿತು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT